ಅಮ್ಮತ್ತಿ:ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ

ವಿರಾಜಪೇಟೆ :ವಿಧಾನಸಭಾ ಕ್ಷೇತ್ರದ, ಅಮ್ಮತಿ ಕಾರ್ಮಾಡುವಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಂಗನವಾಡಿ ಕಟ್ಟಡವನ್ನು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ಉದ್ಘಾಟಿಸಿದರು.
ಪ್ರತಿಯೊಬ್ಬನಿಗೂ ವಿದ್ಯಾಭ್ಯಾಸದ ಮೊದಲ ಅಧ್ಯಾಯ ಅಂಗನವಾಡಿಯಿಂದಲೇ ಪ್ರಾರಂಭ ಆಗುತ್ತದೆ. ಮಕ್ಕಳಲ್ಲಿ ವಿದ್ಯೆಯ ಬಗ್ಗೆ ಮುತುವರ್ಜಿ ಮೂಡಲು ಅಂಗನವಾಡಿಗಳು ಮೂಲ ಕಾರಣವಾಗಬೇಕು. ಹಾಗಾಗಬೇಕಾದಲ್ಲಿ ಅಂಗನವಾಡಿಯಲ್ಲಿನ ವಾತಾವರಣವೂ ಮಕ್ಕಳ ಕಲಿಕೆಯ ಉತ್ಸಾಹಕ್ಕೆ ಪೂರಕವಾಗಿರಬೇಕು. ಪುಟಾಣಿ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವಂತಾಗಲು ಸರಕಾರ ಹಲವು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅಂಗನವಾಡಿಯಲ್ಲಿ ಇರುವ ಶಿಕ್ಷಕರು ಮತ್ತು ಸಹಾಯಕಿಯರು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವವರಾಗಿದ್ದಾರೆ. ಇವರೆಲ್ಲರೂ ತಮ್ಮ ತಮ್ಮ ಜವಾಬ್ದಾರಿಗಳನ್ನು ಅರಿತು, ದೇಶದ ಭವಿಷ್ಯದ ಪ್ರಜೆಗಳನ್ನು ರೂಪಿಸುವಲ್ಲಿ ಶ್ರಮವಹಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷರಾದ ಜಾನ್ಸನ್, ಪಂಚಾಯಿತಿ ಅಧ್ಯಕ್ಷರು, ಇಲಾಖೆಯ ಅಧಿಕಾರಿಗಳು, ವಿರಾಜಪೇಟೆ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಅಮ್ಮತಿ ವಲಯ ಅಧ್ಯಕ್ಷರು ಹಾಗೂ ಪ್ರಮುಖರು ಉಪಸ್ಥಿತರಿದ್ದರು
.
What's Your Reaction?






