ಎ.ಎಸ್ ಪೊನ್ನಣ್ಣ ನೇತೃತ್ವದಲ್ಲಿ ಬೆಂಗಳೂರು ಕೊಡವ ಸಮಾಜದ ವತಿಯಿಂದ ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಅಭಿನಂದನೆ
ಮಡಿಕೇರಿ: ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರ ನೇತೃತ್ವದಲ್ಲಿ ಇಂದು, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರಾದ ಕೆ.ಟಿ ಪೆಮ್ಮಯ್ಯ, ಉಪಾಧ್ಯಕ್ಷರಾದ ಪಿ.ಎಮ್ ಕಮಲ, ಜಂಟಿ ಕಾರ್ಯದರ್ಶಿ ಮಹೇಶ್, ಜಂಟಿ ಖಜಾಂಜಿ ಪಿ.ಕೆ ಗಣಪತಿ,ಪಂಡಾಂಡ ಬೋಪಣ್ಣ, ಹಾಗೂ ಸಮಾಜದ ಮುಖಂಡರು, ಕಂದಾಯ ಸಚಿವರಾದ ಕೃಷ್ಣಬೈರೇಗೌಡ ರವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಈ ಹಿಂದೆ ಶಾಸಕರ ನೇತೃತ್ವದಲ್ಲಿ ಕೊಡವ ಸಮಾಜದ ಪ್ರಮುಖರು, ತಮ್ಮ ಸಮಾಜದ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಬಳಕೆಗಾಗಿ ಸರಕಾರ ನೀಡಿರುವ ಜಮೀನಿಗೆ ನಿಗದಿಪಡಿಸಿದ್ದ ದರವನ್ನು ಪರಿಷ್ಕರಿಸಿ ಅನುಕೂಲ ಮಾಡಿಕೊಡಬೇಕೆಂದು ಮನವಿ ಸಲ್ಲಿಸಿದ್ದರು. ಅದಕ್ಕೆ ಪೂರಕವಾಗಿ ಸ್ಪಂದಿಸಿದ್ದ ಕಂದಾಯ ಸಚಿವರು, ದರವನ್ನು ಪರಿಷ್ಕರಿಸಿ ಅನುಮೋದನೆ ನೀಡಿರುವುದಕ್ಕೆ ಧನ್ಯವಾದ ಸಲ್ಲಿಸಲಾಯಿತು.
ಇದೇ ಭಾನುವಾರ 15-06-2025 ರಂದು, ಬೆಂಗಳೂರಿನ ವಸಂತನಗರದ ಕೊಡವ ಸಮಾಜದಲ್ಲಿ, ಈ ಪ್ರಯುಕ್ತ ಅಭಿನಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾಗಿ ಸರಕಾರದ ಪ್ರಮುಖರೊಂದಿಗೆ, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಎ.ಎಸ್ ಪೊನ್ನಣ್ಣ ರವರು ಭಾಗವಹಿಸಲಿದ್ದಾರೆ.
What's Your Reaction?






