ಕರ್ನಾಟಕ ರಾಜ್ಯ ಸರ್ಕಾರಿ ಪ್ಲಾಂಟೇಶನ್ ಸಂಘದ ವತಿಯಿಂದ ಎ ಎಸ್. ಪೊನ್ನಣ್ಣ ರವರಿಗೆ ಮನವಿ :
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಪ್ಲಾಂಟೇಶನ್ ಸಂಘದ ಪದಾಧಿಕಾರಿಗಳು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಭೇಟಿಯಾಗಿ ಬೆಳೆಗಾರರ ಲೀಸ್ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ ಹಾಗೂ ಲೀಸ್ ಅರ್ಜಿ ಪ್ರಕ್ರಿಯೆಗೆ ಚಾಲನೆ ನೀಡಲು ಮಾನ್ಯ ಮುಖ್ಯಮಂತ್ರಿಗಳ ಹಾಗೂ ಕಂದಾಯ ಸಚಿವರೊಂದಿಗೆ ಚರ್ಚಿಸಿ ಬೆಳೆಗಾರರ ಸಮುದಾಯಕ್ಕೆ ಅನುಕೂಲ ಕಲ್ಪಿಸಲು ಮನವಿ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ತಮ್ಮ ಸಹಕಾರದಿಂದ ಕರ್ನಾಟಕ ರಾಜ್ಯ ಸರ್ಕಾರ ಪ್ಲಾಂಟೇಶನ್ ಬೆಳೆಗಾರರ ಅನಧಿಕೃತ ಸಾಗುವಳಿಗಳನ್ನು ದೀರ್ಘಾವಧಿ ಲೀಸ್ ಗೆ ನೀಡಲು ನಿಯಮಗಳನ್ನು ರೂಪಿಸಿದ್ದು ಅದಕ್ಕಾಗಿ ತಮಗೆ ಆಭಾರಿಯಾಗಿದ್ದೇವೆ ಎಂದು ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಅಭಿನಂದಿಸಿದರು. ಪೊನ್ನಣ್ಣ ಅವರು ಪ್ಲಾಂಟೇಶನ್ ಬೆಳೆಗಾರರ ಸದಸ್ಯರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ ಕೂಡಲೇ ಸಮಸ್ಯೆಗಳನ್ನು ಪರಿಹರಿಸಲಾಗುವುದೆಂದು ಭರವಸೆ ನೀಡಿದರು.
What's Your Reaction?






