ಕೊಡಗು ಜಿಲ್ಲೆಯಲ್ಲಿ ಅಬ್ಬರಿಸುತ್ತಿರುವ ಮಳೆ:ಕರಡಿಗೋಡು ಗ್ರಾಮದ ಹೊಳೆಕೆರೆ ರಸ್ತೆ ಕಾವೇರಿ ನದಿ ಪ್ರವಾಹದಿಂದ ಸಂಪರ್ಕ ಕಡಿತ
ಸಿದ್ದಾಪುರ:ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆ ರಸ್ತೆ ಕಾವೇರಿ ನದಿ ಪ್ರವಾಹದಿಂದ ಸಂಪರ್ಕ ಕಡಿತಗೊಂಡಿದ್ದು, ಬದಲಿ ರಸ್ತೆ ವ್ಯವಸ್ಥೆ ಇರುತ್ತದೆ.ಈ ಬಗ್ಗೆ ಕಂದಾಯ ಪರಿವೀಕ್ಷಕರು ಸ್ಥಳ ಪರಿಶೀಲನೆ ನಡೆಸಿ ಅಪಾಯದ ಸ್ಥಳಗಳಿಗೆ ತೆರಳದಂತೆ ಹಾಗೂ ಆ ಭಾಗದ ಜನರಿಗೆ ಕಾಳಜಿ ಕೇಂದ್ರಕ್ಕೆ ತೆರಳಲು ತಿಳಿಸಲಾಗಿದೆ.
