ಚೆಟ್ಟಳ್ಳಿ ಸಮೀಪದ ಕಂಡಕರೆ ನಿವಾಸಿ ಮಾಜಿ ಸೈನಿಕ ಗಿರೀಶ್ ನಾಪತ್ತೆ! ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ!..

ಕುಶಾಲನಗರ: ಚೆಟ್ಟಳ್ಳಿ ಸಮೀಪದ ಕಂಡಕರೆ ನಿವಾಸಿ ಮಾಜಿ ಸೈನಿಕ ಗಿರೀಶ್ ಕುಶಾಲನಗರದ ಎಸ್.ಎಲ್.ಎನ್ ಸಂಸ್ಥೆ ಯ ಉದ್ಯೋಗಿ ಉದ್ಯೋಗಿಯಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದು,ಗಿರೀಶ್(44) ಅವರು ಸ್ಕೂಟಿ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆಯಾಗಿದೆ.ಕಾವೇರಿ ನದಿಗೆ ಹಾರಿ ಗಿರೀಶ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದ್ದು,ಕುಶಾಲನಗರ ಪೊಲೀಸರು, ಅಗ್ನಿ ಶಾಮಕದಳ, ಎನ್ ಡಿಆರ್ ಎಫ್ ಸಿಬ್ಬಂದಿಗಳಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ.ತೆಪ್ಪದಕಂಡಿ ಬಳಿ ಮೈದುಂಬಿ ಕಾವೇರಿ ನದಿ ಹರಿಯುತ್ತಿದ್ದು,ಕುಶಾಲನಗರ ಪಟ್ಟಣ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
What's Your Reaction?






