ಜುಲೈ 1 ರಂದು ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಕೆ.ವಿ ಪ್ರಭಾಕರ್

Jun 21, 2025 - 14:25
 0  32
ಜುಲೈ 1 ರಂದು ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಕೆ.ವಿ ಪ್ರಭಾಕರ್

ಚಾಮರಾಜನಗರ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರ ವೃತ್ತಿ ಮತ್ತು ಬದುಕಿನ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದಾರೆ. ಜುಲೈ 1 ಕ್ಕೆ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ ಎಂದು ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಮಾಹಿತಿ ನೀಡಿದ್ದಾರೆ.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಐದನೇ ವರ್ಷ ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

5 ಲಕ್ಷ ರೂಪಾಯಿ ವರೆಗಿನ ಆರೋಗ್ಯ ಚಿಕಿತ್ಸಾ ವೆಚ್ಚವನ್ನು ಒದಗಿಸುವ ಪತ್ರಕರ್ತರ ಆರೋಗ್ಯ ಕಾರ್ಡ್ ವ್ಯವಸ್ಥೆಯನ್ನೂ ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಆರೋಗ್ಯ ಸಂಜೀವಿನಿ ಕಾರ್ಡ್ ಕೂಡ ಜುಲೈ 1 ರಂದು ನೀಡಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲಾ ಪತ್ರಕರ್ತರ ಭವನ ಮತ್ತು ತಾಲ್ಲೂಕು ಪತ್ರಕರ್ತರ ಭವನದ ನಿರ್ಮಾಣಕ್ಕೂ ಸರ್ಕಾರದ ಜೊತೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0