ನಾಪೋಕ್ಲು: ಚಲಿಸುತ್ತಿದ್ದ ಸ್ಕೂಟಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು: ಸವಾರನಿಗೆ ಗಾಯ,ಆಸ್ಪತ್ರೆಗೆ ದಾಖಲು
ವರದಿ:ಝಕರಿಯ
ನಾಪೋಕ್ಲು: ಚಲಿಸುತ್ತಿದ್ದ ಸ್ಕೂಟಿಯ ಹಿಂಬದಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಸ್ಕೂಟಿ ಸವಾರ ರಸ್ತೆಗೆ ಉರುಳಿಬಿದ್ದು ಗಾಯಗಳಾಗಿ ಆಸ್ಪತ್ರೆ ಸೇರಿರುವ ಘಟನೆ ಮಂಗಳವಾರ ನಾಪೋಕ್ಲುವಿನಲ್ಲಿ ನಡೆದಿದೆ.
ನಾಪೋಕ್ಲುವಿನಿಂದ ಹಳೇ ತಾಲೂಕು ಕಡೆಗೆ ತೆರಳುವ ಮುಖ್ಯ ರಸ್ತೆಯ ಕರ್ನಾಟಕ ಪಬ್ಲಿಕ್ ಶಾಲೆಯ ಮುಂಭಾಗದಲ್ಲಿ ಚಲಿಸುತ್ತಿದ್ದ ಸ್ಕೂಟಿಯ ಹಿಂಬದಿಗೆ ಕೇರಳ ನೋಂದಣಿಯ ಮಾರುತಿ ಶಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ಸ್ಕೂಟಿ ಸವಾರ ಚೆರಿಯಪರಂಬು ಗ್ರಾಮದ ನಿವಾಸಿ ಕೃಷ್ಣ ಕುಮಾರ್ ಎಂಬುವವರು ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದು ತಲೆ,ಕೈ ಮತ್ತು ಕಾಲಿನ ಭಾಗಕ್ಕೆ ಗಾಯಗಳಾಗಿವೆ. ಗಾಯಗೊಂಡ ಸ್ಕೂಟಿ ಸವಾರನಿಗೆ ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತದಿಂದ ಸ್ಕೂಟಿ ಹಾಗೂ ಕಾರಿಗೆ ಹಾನಿಯಾಗಿದೆ.ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
What's Your Reaction?






