ಪೊನ್ನಂಪೇಟೆ:ತೋಟದ ಲೈನ್ ಮನೆಯಲ್ಲಿ ವಾಸಿಸುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ: ಮುಖ ಭಾಗಕ್ಕೆ ಗಾಯ:ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನೆ

ಪೊನ್ನಂಪೇಟೆ: ತಾಲೂಕಿನ, ಬಾಳಲೆ ಸಮೀಪದ ಜಾಗಲೆ ಎಂಬಲ್ಲಿ ಆಳಮೇಂಗಡ ಬಿದ್ದಪ್ಪ ಎಂಬುವರ ತೋಟದ ಲೈನ್ ಮನೆಯಲ್ಲಿ ವಾಸಿಸುತ್ತಿದ್ದ ಕಾಕು ಎಂಬುವರ ಪುತ್ರ ಕುಳ್ಳ (42) ನಿನ್ನೆ ರಾತ್ರಿ 11 ಗಂಟೆ ಸಮಯದಲ್ಲಿ ಮನೆಯ ಹೊರಗಡೆ ಮೂತ್ರ ವಿಸರ್ಜನೆ ಎಂದು ತೆರಳಿದ ಸಂದರ್ಭ ಕರಡಿ ದಾಳಿ ನಡೆಸಿ ಮುಖದ ಭಾಗಕ್ಕೆ ಹೆಚ್ಚಿನ ಗಾಯಗೊಳಿಸಿದೆ. ಗೋಣಿಕೊಪ್ಪಲು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಕುಳ್ಳನನ್ನು ಹೆಚ್ಚು ಹೆಚ್ಚುಗಾಗಿ ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ.
What's Your Reaction?






