ವಿರಾಜಪೇಟೆ:ಶಾಸಕ ಎ.ಎಸ್ ಪೊನ್ನಣ್ಣ ಅವರನ್ನು ಭೇಟಿ ಮಾಡಿದ ಮದೆ ಗ್ರಾಮದ ಅಮ್ಮಂಗೇರಿಯ ನಿವಾಸಿಗಳು
ವಿರಾಜಪೇಟೆ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮದೆ ಗ್ರಾಮದ, ಅಮ್ಮಂಗೇರಿಯ ಸುಮಾರು 30ಕ್ಕೂ ಅಧಿಕ ನಿವಾಸಿಗಳ ನಿಯೋಗವು, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್ ಹಾಗೂ ಡಿಸಿಸಿ ಪ್ರಧಾನ ಕಾರ್ಯದರ್ಶಿಯವರಾದ ಕೊಲ್ಯದ ಗಿರೀಶ್ ರವರ ನೇತೃತ್ವದಲ್ಲಿ, ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರನ್ನು ಅವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಹಲವು ಬೇಡಿಕೆಗಳ ಮನವಿ ಪತ್ರವನ್ನು ನೀಡಿದರು. ಪ್ರಮುಖವಾಗಿ ತಮ್ಮ ಭಾಗಕ್ಕೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಹಾಗೂ ಅಂಗನವಾಡಿ ಕೇಂದ್ರವನ್ನು ತೆರೆಯುವ ಸಲುವಾಗಿ ಶಾಸಕರಲ್ಲಿ ಮನವಿ ಸಲ್ಲಿಸಿದರು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಶಾಸಕರು, ಆದಷ್ಟು ಶೀಘ್ರ ಎಲ್ಲಾ ಮನವಿಗಳನ್ನು ಪರಿಗಣಿಸಿ ಅಗತ್ಯಕ್ಕನುಸಾರ ಸ್ಪಂದಿಸುವುದಾಗಿ ಭರವಸೆ ನೀಡಿದರು.
