ಟೆಕ್ಕಿ ಶರ್ಮಿಳಾ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ವಿರಾಜಪೇಟೆ ಮೂಲದ 18ವರ್ಷದ ಯುವಕ ಕರ್ನಲ್ ಕುರೈ ಮಾಡಿದ್ದೇನು ಗೊತ್ತಾ!

Jan 27, 2026 - 13:13
 0  2.9k
ಟೆಕ್ಕಿ ಶರ್ಮಿಳಾ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ವಿರಾಜಪೇಟೆ ಮೂಲದ 18ವರ್ಷದ ಯುವಕ ಕರ್ನಲ್ ಕುರೈ ಮಾಡಿದ್ದೇನು ಗೊತ್ತಾ!

ಬೆಂಗಳೂರು,ಜ.26: ರಾಮಮೂರ್ತಿ ನಗರದಲ್ಲಿ ಟೆಕ್ಕಿ ಶರ್ಮಿಳಾ ಹತ್ಯೆ (Techie Sharmila case) ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ತನಿಖೆ ವೇಳೆ ಆರೋಪಿ ಸತ್ಯ ಬಿಚ್ಚಿಟ್ಟಿದ್ದಾನೆ. ನೆರೆಮನೆಯವನೇ ಆದ ಆರೋಪಿ ಕೊಡಗಿನ ವಿರಾಜಪೇಟೆ ಮೂಲದ ಕರ್ನಲ್ ಕುರೈ (18), ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಎನ್ನುವ ಶಂಕೆ ವ್ಯಕ್ತವಾಗಿತ್ತು.

ಮೊದಲಿಗೆ ದೌರ್ಜನ್ಯದ ಆರೋಪವನ್ನು ಕರ್ನಲ್ ಕುರೈ ತಳ್ಳಿಹಾಕಿದ್ದ. ಆದರೀಗ ಆಕೆಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿರುವುದಾಗಿ ಪೊಲೀಸ್ ತನಿಖೆಯ ವೇಳೆ ಒಪ್ಪಿಕೊಂಡಿದ್ದಾನೆ.

 34 ವಯಸ್ಸಿನ ಟೆಕ್ಕಿ ಶರ್ಮಿಳಾನ್ನು ಪ್ರೀತಿಸುತ್ತಿದ್ದ. ಆಕೆಯ ಹತ್ಯೆಗೂ ಒಂದುವರೆ ತಿಂಗಳಿಂದ ಪ್ರತಿನಿತ್ಯ ಟೆರಸ್ ಮೇಲೆ ಯುವತಿಯ ಚಲನ ವಲನಗಳನ್ನು ಗಮನಿಸುತ್ತಿದ್ದ. ಶರ್ಮಿಳಾ ಕೆಲಸಕ್ಕೆ ಹೋಗುವಾಗಲೂ ಆಕೆಯನ್ನು ಹಿಂಬಾಲಿಸುತ್ತಿದ್ದ ಯುವಕ, ಕೆಲಸ ಮುಗಿಸಿ ಆಕೆ ವಾಪಸ್ ಬರುವ ವೇಳೆ ಕಾದು ಕೂರುತ್ತಿದ್ದ ಎಂದು ತನಿಖೆಯ ವೇಳೆ ತಿಳಿದುಬಂದಿದೆ. ಹಲವು ದಿನಗಳಿಂದ ಆಕೆಯ ಮೇಲೆ ಕಣ್ಣಿಟ್ಟಿದ್ದ ಆರೋಪಿ ಜನವರಿ 3ರ ರಾತ್ರಿ ಟೆಕ್ಕಿಯ ಮನೆಗೆ ನುಗ್ಗಿ, ಆಕೆಯ ಮೇಲೆ ಮೇಲೆ ಅತ್ಯಾಚಾರಕ್ಕೆ ಪ್ರಯತ್ನ ಪಟ್ಟಿದ್ದಾಗಿ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ.

 ಆ ರಾತ್ರಿ ನಡೆದಿದ್ದೇನು?; ಶರ್ಮಿಳಾ ಮೇಲೆ ಲೈಂಗಿಕ ದೌರ್ಜನ್ಯವೆಸಗಲು ಯತ್ನಿಸಿದ ಸಮಯದಲ್ಲಿ ಆಕೆ ಜೋರಾಗಿ ಕಿರುಚಿಕೊಂಡಿದ್ದರು. ಈ ವೇಳೆ ಆಕೆಯ ಬಾಯಿಯನ್ನು ಗಟ್ಟಿಯಾಗಿ ಮುಚ್ಚಿದ್ದ. ಮಹಿಳೆ ಎಷ್ಟೇ ಬೇಡಿಕೊಂಡರೂ ಕನಿಕರವಿಲ್ಲದೆ ಕತ್ತು ಹಿಸುಕಿ ಕೊಲೆ ಮಾಡಿದ್ದ.

 ಆ ಬಳಿಕ ಟಿಶ್ಯು ಪೇಪರ್ ಹಾಸಿಗೆ ಮೇಲಿಟ್ಟು ಬೆಂಕಿ ಹಚ್ಚಿದ್ದ ಕಿರಾತಕ‌, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಾಲ್ಕನಿ ಡೋರ್ ಮೂಲಕವೇ ಜಿಗಿದು ಪರಾರಿಯಾಗಿದ್ದ. ಅಗ್ನಿ ಅವಘಡದಿಂದಾಗಿ ಮಹಿಳೆ ಸಾವನ್ನಪ್ಪಿದ್ದಾರೆಂದು ಬಿಂಬಿಸಲು ಹೊರಟಿದ್ದವನ ಸತ್ಯ ವಿಚಾರಣೆ ವೇಳೆ ಹೊರಬಂದಿದೆ.

ಸಧ್ಯಕ್ಕೆ ಮೃತರ ಪೋಸ್ಟ್​ಮಾರ್ಟಮ್ ರಿಪೋರ್ಟ್​ ಸೇರಿ ಕೆಲ ಮೆಡಿಕಲ್ ಸ್ಯಾಂಪಲ್​ಗಳನ್ನು ಎಫ್​ಎಸ್​ಎಲ್ಗೆ ಕಳುಹಿಸಲಾಗಿದ್ದು, ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

What's Your Reaction?

Like Like 0
Dislike Dislike 0
Love Love 1
Funny Funny 2
Angry Angry 4
Sad Sad 7
Wow Wow 0