ಕಾಳಜಿ ಕೇಂದ್ರಕ್ಕೆ ಎ‌ಎಸ್ ಪೊನ್ನಣ್ಣ ಭೇಟಿ

Jun 28, 2025 - 21:39
 0  56
ಕಾಳಜಿ ಕೇಂದ್ರಕ್ಕೆ ಎ‌ಎಸ್ ಪೊನ್ನಣ್ಣ ಭೇಟಿ

ಪೊನ್ನಂಪೇಟೆ: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನ ಬಲ್ಯಮಂಡೂರಿನಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು ಭೇಟಿ ನೀಡಿದರು.   

ಜಿಲ್ಲಾಡಳಿತದ ಸೂಚನೆಯಂತೆ, ಈ ಹಿಂದೆ ಬಲ್ಯಮುಂಡೂರು ಭಾಗದ ಹಲವು ನಿವಾಸಿಗಳನ್ನು ಸುರಕ್ಷತೆಗಾಗಿ ಕಾಳಜಿ ಕೇಂದ್ರದಲ್ಲಿ ಇರಿಸಲಾಗಿದ್ದು, ಕೇಂದ್ರಕ್ಕೆ ತೆರಳಿದ ಶಾಸಕರು ಅಲ್ಲಿಯ ಜನರ ಕ್ಷೇಮವನ್ನು ವಿಚಾರಿಸುತ್ತ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಸದ್ಯದಲ್ಲೇ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಇದೇ ಸಂದರ್ಭದಲ್ಲಿ ನಿವಾಸಿಗಳಿಗೆ ಶಾಸಕರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ವಲಯ ಅಧ್ಯಕ್ಷರಾದ ರಾಜ ಕಾರ್ಯಪ್ಪ, ಹಿರಿಯ ಕಾಂಗ್ರೆಸ್ ಮುಖಂಡರಾದ ಪೊನ್ನಪ್ಪ, ಪಕ್ಷದ ಪ್ರಮುಖರು, ತಹಶೀಲ್ದಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0