ಅಮ್ಮತ್ತಿ: ಕೇರಳ ರಾಜ್ಯದ ಲಾಟರಿ ಟಿಕೆಟ್ ಮಾರಾಟ,ವ್ಯಕ್ತಿಯ ಬಂಧನ

ಅಮ್ಮತ್ತಿ: ಕೇರಳ ರಾಜ್ಯದ ಲಾಟರಿ ಟಿಕೆಟ್ ಮಾರಾಟ,ವ್ಯಕ್ತಿಯ ಬಂಧನ
ಸಾಂದರ್ಭಿಕ ಚಿತ್ರ

ಸಿದ್ದಾಪುರ, ಜ. 6: ಅಕ್ರಮವಾಗಿ ಹೊರ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವೀರಾಜಪೇಟೆಯ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಅಮ್ಮತ್ತಿಯ ಮುತ್ತಪ್ಪ ದೇವಾಲಯದ ಬಳಿ ಸಾರ್ವಜನಿಕರ ರಸ್ತೆಯಲ್ಲಿ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಕೆ.ಎಸ್. ಅಬ್ರಾಹಂ (ಜೋಯಿ) ಎಂಬಾತನನ್ನು ಬಂಧಿಸಿ ಲಾಟರಿ ಟಿಕೆಟ್‌ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.