ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ಸಂಭ್ರಮದ ವಾರ್ಷಿಕೋತ್ಸವ : ಸ್ಪರ್ಧಾತ್ಮಕ ಪರೀಕ್ಷೆಗೆ ಸೂಕ್ತ ತಯಾರಿ ಮಾಡಿಕೊಳ್ಳಲು ವಾತಾ೯ಪತ್ರಿಕೆಗಳು ಸಹಕಾರಿ: ಸುಮಿತ ಕಿವಿಮಾತು

Dec 15, 2025 - 14:11
Dec 15, 2025 - 15:01
 0  374
ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ಸಂಭ್ರಮದ ವಾರ್ಷಿಕೋತ್ಸವ :  ಸ್ಪರ್ಧಾತ್ಮಕ ಪರೀಕ್ಷೆಗೆ ಸೂಕ್ತ ತಯಾರಿ  ಮಾಡಿಕೊಳ್ಳಲು ವಾತಾ೯ಪತ್ರಿಕೆಗಳು ಸಹಕಾರಿ: ಸುಮಿತ ಕಿವಿಮಾತು

ಮಡಿಕೇರಿ ಡಿ. 15 - ಸ್ಪಧಾ೯ತ್ಮಕ ಪರೀಕ್ಷೆಗಳಿಗೆ ಸೂಕ್ತ ತಯಾರಿ ಮಾಡಿಕೊಳ್ಳುವಲ್ಲಿ ವಾತಾ೯ ಪತ್ರಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹಾಸನ ಜಿಲ್ಲೆಯ ಅಬಕಾರಿ ಇಲಾಖೆಯ ಉಪ ಆಯುಕ್ತರಾದ ಕೆ.ಕೆ. ಸುಮಿತ ಅಭಿಪ್ರಾಯಪಟ್ಟಿದ್ದಾರೆ.

 ಮಾದಾಪುರದ ಶ್ರೀಮತಿ ಡಿ ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಥೆಯ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಹಾಸನ ಜಿಲ್ಲೆಯ ಅಬಕಾರಿ ಇಲಾಖೆಯ ಉಪ ಆಯುಕ್ತರು ಮತ್ತು ಸಂಸ್ಥೆಯ ಮಾಜಿ‌ ಉಪನ್ಯಾಸಕಿ ವಿದ್ಯಾಥಿ೯ನಿ ಕೆ ಕೆ ಸುಮಿತಾ , ವಿದ್ಯಾರ್ಥಿಗಳಿಗೆ ಗುರಿ ಮತ್ತು ಛಲ ಎರಡೂ ಇರಬೇಕು.ಪ್ರಚಲಿತ ವಿದ್ಯಮಾನ ಮತ್ತು ವಾರ್ತಾ ಪತ್ರಿಕೆಯಲ್ಲಿನ ಮುಖ್ಯಾಂಶಗಳನ್ನು ಬರೆದಿಟ್ಟುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗೆ ಸೂಕ್ತ ತಯಾರಿ ನಡೆಸಿಕೊಳ್ಳಬೇಕು.

 ಸತತ ಪರಿಶ್ರಮ ಹಾಗೂ ಆತ್ಮ ವಿಶ್ವಾಸ ದಿಂದ ಮುನ್ನಡೆಯಬೇಕೆಂದು ಅವರು ವಿದ್ಯಾಥಿ೯ಗಳಿಗೆ ಕಿವಿಮಾತು ಹೇಳಿದರು. ಸ್ವತಃ ಕ್ರೀಡಾಪಟುವಾದ ಸುಮಿತ, ಕ್ರೀಡೆ ಮತ್ತು ವಿದ್ಯಾಭ್ಯಾಸ ನಮ್ಮ ಭವಿಷ್ಯವನ್ನು ರೂಪಿಸುತ್ತದೆ ಎಂದು ಹೇಳಿದರು.

 ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಕರ್ನಲ್ ಬಿ ಜಿ ವಿ ಕುಮಾರ್ ಮಾತನಾಡಿ ಇಂದಿನ ಮಕ್ಕಳು ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕೆಂದು ತಿಳಿ ಹೇಳಿದರು. ಸಂಸ್ಥೆಯ ವರದಿಯನ್ನು ಪ್ರಾಂಶುಪಾಲ ಸಿ ಜಿ ಮಂದಪ್ಪ ವಾಚಿಸಿದರು .ಈ ಸಂದರ್ಭ ಶೈಕ್ಷಣಿಕ ಸಾಧಕರಿಗೆ ಹಾಗೂ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಉಪಾಧ್ಯಕ್ಷ ಅಜಿತ್ ಅಪ್ಪಚ್ಚು, ಕಾರ್ಯದರ್ಶಿ ಎಂ ಬಿ ಬೋಪಣ್ಣ ಹಾಗೂ ಸದಸ್ಯರಾದ ಬೋಜಮ್ಮ, ಪ್ರಕಾಶ್, ವಾಣಿಜ್ಯ ಇಲಾಖೆಯ ನಿವೃತ್ತ ಅಡಿಷನಲ್ ಕಮಿಷನರ್ ಬಿ ಎ ನಾಣಿಯಪ್ಪ, ಮಂಜುನಾಥ ಹಾಜರಿದ್ದರು. ಸಂಸ್ಥೆಯ ಉಪನ್ಯಾಸಕ ರಾಜ ಸುಂದರಂ ಸ್ವಾಗತಿಸಿ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ರೀಟಾರವರು ವಂದಿಸಿದರು.

 ಹತ್ತನೇ ತರಗತಿ ವಿದ್ಯಾಥಿ೯ನಿ ಅಶ್ವದಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸ್ನೇಹ ನಿರೂಪಿಸಿದರು. ಚೆನ್ನಮ್ಮ ಸಂಸ್ಥೆಯ ಅಂಗ್ಲ ಮಾಧ್ಯಮದ ಆಡಳಿತ ಮಂಡಳಿಯ ಸದಸ್ಯರಾದ ಮಲ್ಲಿಕಾ ಬೋಪಣ್ಣ , ಮಿಮ್ಮಿ ಚಿಟ್ಟಿಯಣ್ಣ ಸಂಸ್ಥೆಯ ನಿವೃತ್ತ ಶಿಕ್ಷಕರು, ಪೋಷಕರು, ಹಳೇ ವಿದ್ಯಾರ್ಥಿಗಳು ಹಾಜರಿದ್ದರು. ಆಂಗ್ಲ ಮಾಧ್ಯಮದ ಪುಟಾಣಿಗಳಿಂದ , ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

What's Your Reaction?

Like Like 2
Dislike Dislike 1
Love Love 1
Funny Funny 0
Angry Angry 0
Sad Sad 1
Wow Wow 0