ಆ. 08 ರಂದು ಪತ್ರಕತ೯ರ ಸಂಘದ ವಾಷಿ೯ಕ ಮಹಾಸಭೆ: ಸಾಧಕ ಪತ್ರಕತ೯ರಿಗೆ ಸನ್ಮಾನ
ಮಡಿಕೇರಿ ಆ. 06 - ಕೊಡಗು ಪತ್ರಕತ೯ರ ಸಂಘ(ರಿ) ನ ವಾಷಿ೯ಕ ಮಹಾಸಭೆಯು ಆಗಸ್ಟ್ 08 ರಂದು ಶನಿವಾರ ಬೆಳಗ್ಗೆ 10.30 ಗಂಟೆಗೆ ನಗರದ ಪತ್ರಿಕಾಭವನ ಸಭಾಂಗಣದಲ್ಲಿ ಆಯೋಜಿತವಾಗಿದೆ.
ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಅಧ್ಯಕ್ಷತೆಯಲ್ಲಿ ಆಯೋಜಿತ ವಾಷಿ೯ಕ ಮಹಾಸಭೆಯಲ್ಲಿ ರಾಜ್ಯ ಚೇಂಬರ್ ಆಫ್ ಕಾಮಸ್೯ ವತಿಯಿಂದ ಅತ್ಯುತ್ತಮ ಉದ್ಯಮಕ್ಕಾಗಿನ ಪ್ರಶಸ್ತಿಗೆ ಭಾಜನರಾದ ಶಕ್ತಿ ಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್, ಕನ್ನಡ ಭವನ ಸಂಸ್ಥೆಯಿಂದ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿಗೆ , ಭಾಜನರಾದ ಶ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ, ತಮಿಳು ಪತ್ರಕತ೯ರ ಸಂಘದ ಪ್ರಶಸ್ತಿಗೆ ಭಾಜನರಾದ ಎಸ್.ಎಂ.ಮುಬಾರಕ್, ಸಮಥ೯ ಸಾಹಿತ್ಯ ಮತ್ತು ಸಾಂಸ್ಕೖತಿಕ ಪ್ರತಿಷ್ಟಾನ ಸಂಸ್ಥೆಯ ವತಿಯಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿನ ಸಾಧನೆಗಾಗಿ ಗಾಂಧಿ ಪ್ರಿಯ ಪ್ರಶಸ್ತಿ ಪಡೆದ ಅನಿಲ್ ಹೆಚ್.ಟಿ.,ಜಿ್ಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಕ್ಕೆ ಭಾಜನರಾಗಿದ್ದ ಬಿ.ಸಿ. ದಿನೇಶ್, ಎನ್ ಎಸ್ ಎಸ್ ಸಂಸ್ಥೆಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದ ಡಾ. ಎಂ.ಎನ್. ವನಿತ್ ಕುಮಾರ್, ಬುದ್ದ ನಾಡ ಭೂಷಣ ಪ್ರಶಸ್ತಿ ಪಡೆದ ಜಯಪ್ಪ ಹಾನಗಲ್ ಅವರನ್ನು ಸನ್ಮಾನಿಸಿ ಗೌರವಿಸಲಾಗುತ್ತಿದೆ ಎಂದು ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
1
Wow
0
