ವಿದ್ಯಾಭ್ಯಾಸ ಸೌಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಮಡಿಕೇರಿ :-ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿ ನಿಗಮ ವತಿಯಿಂದ 2026-27ನೇ ಸಾಲಿನ ಕ್ರಿಶ್ಚಿಯನ್ ಜನಾಂಗದವರಿಗೆ ಅರಿವು ಯೋಜನೆಯಡಿ ವಿದ್ಯಾಭ್ಯಾಸ ಸಾಲ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದ ವೆಬ್ಸೈಟ್: https://kccdclonline.karnataka.gov.in ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, ಗ್ರಾಮಾಂತರ ಪೋಲೀಸ್ ಠಾಣೆ ಹತ್ತಿರ, ಎಫ್ಎಂಸಿ ಕಾಲೇಜು ರಸ್ತೆ, ಮಡಿಕೇರಿ ಇಲ್ಲಗೆ ಭೇಟಿ ನೀಡಬಹುದು ಹಾಗೂ ದೂ.ಸಂ.08272-201449 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

