ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಅರ್ಜಿ ಆಹ್ವಾನ

ಮಡಿಕೇರಿ:-ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ (1.3) ಹೊಸ ಪಾಲನೆ ಕೊಳಗಳ ನಿರ್ಮಾಣ (ನರ್ಸರಿ/ ಮೀನುಮರಿ ಪಾಲನೆ ಕೊಳಗಳು) ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 26 ಕೊನೆಯ ದಿನವಾಗಿದೆ. ಈ ಉಪ ಯೋಜನೆ ಅನುಷ್ಠಾನಗೊಳಿಸಿದ ಫಲಾನುಭವಿಗಳಿಗೆ ಶೇ.40 ರಷ್ಟು ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಡಿಕೇರಿ, ಪೆÇನ್ನಂಪೇಟೆ ಮತ್ತು ಸೋಮವಾರಪೇಟೆ ಅವರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪ ನಿರ್ದೇಶಕರಾದ ಸಿ.ಎಸ್.ಸಚಿನ್ ಅವರು ತಿಳಿಸಿದ್ದಾರೆ.