ವಿಧಾನಸಭಾ ಉಪಸಭಾಪತಿ ರುದ್ರಪ್ಪ ಲಮಾಣಿ ಕೊಡಗು ಭೇಟಿ: ಸ್ವಾಗತಿಸಿದ ಶಾಸಕ ಡಾ.ಮಂತರ್ ಗೌಡ
admincoorgdaily
ಮಡಿಕೇರಿ:ಕರ್ನಾಟಕ ವಿಧಾನಸಭೆಯ ಉಪಸಭಾಪತಿ ರುದ್ರಪ್ಪ ಲಮಾಣಿ ಅವರು ಕೊಡಗು ಜಿಲ್ಲೆಯ ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಛೇರಿಯ ತಡೆಗೋಡೆ ಕಾಮಗಾರಿ ಪರಿಶೀಲನೆ ಆಗಮಿಸಿದ ಸಂದರ್ಭದಲ್ಲಿ ಮಡಿಕೇರಿ ತಾಜ್ ಹೋಟೆಲ್ ನಲ್ಲಿ ಅವರನ್ನು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಸ್ವಾಗತಿಸಿದರು.ನಾಳೆ ಡೆಪ್ಯುಟಿ ಸ್ಪೀಕರ್ ಲುದ್ರಪ್ಪ ಲಮಾಣಿ ಅವರ ನೇತೃತ್ವದಲ್ಲಿ ಕಾಮಗಾರಿ ಪರಿಶೀಲನೆ ನಡೆಯಲಿದೆ. ಈ ಸಂದರ್ಭ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣಿರ, ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕವನ್,ಮೂಡ ಸದಸ್ಯರಾದ ಚಂದ್ರಶೇಖರ್ ಮತ್ತಿತರರು ಇದ್ದರು.