ವಿಧಾನಸಭಾ ಪರಿಶೀಲನಾ ಸಮಿತಿ ಸಭೆ:ಕೊಡಗಿನ ಶಾಸಕದ್ವಯರು ಭಾಗಿ

ವಿಧಾನಸಭಾ ಪರಿಶೀಲನಾ ಸಮಿತಿ ಸಭೆ:ಕೊಡಗಿನ ಶಾಸಕದ್ವಯರು ಭಾಗಿ

ಬೆಂಗಳೂರು: ಕೊಡಗು ಜಿಲ್ಲೆಯ ದಶಕಗಳ ಸಮಸ್ಯೆಯಾಗಿರುವ ಪಟ್ಟೆದಾರ, ಭೂ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ವಹಿಸುವ ಸಂಬಂಧ ಇಂದು ಮೂರನೇ ಬಾರಿಗೆ ಕರ್ನಾಟಕ ವಿಧಾನಸಭೆ ಪರಿಶೀಲನಾ ಸಮಿತಿ ಸಭೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ರವರ ನೇತೃತ್ವದಲ್ಲಿ ನಡೆಯಿತು. ಈ ಸಭೆಯಲ್ಲಿ ಹಲವು ವಿಷಯಗಳಿಗೆ ಸಂಬಂಧಿಸಿ ಮಹತ್ವದ ಕೆಲ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ಈ ಸಭೆಯಲ್ಲಿ ಕೊಡಗಿನ ಶಾಸಕರುಗಳಾದ ಡಾ.ಮಂತರ್ ಗೌಡ, ಎ ಎಸ್ ಪೊನ್ನಣ್ಣ ರವರು ಉಪಸ್ಥಿತರಿದ್ದರು.