ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನುಮುಷ್ತಾಕ್ ಆಹ್ವಾನ ವಿರೋಧಿಸಿ ಸೋಮವಾರಪೇಟೆ ಮಂಡಲ ಬಿಜೆಪಿ ಪ್ರತಿಭಟನೆ

ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನುಮುಷ್ತಾಕ್ ಆಹ್ವಾನ ವಿರೋಧಿಸಿ ಸೋಮವಾರಪೇಟೆ ಮಂಡಲ ಬಿಜೆಪಿ ಪ್ರತಿಭಟನೆ

ಸೋಮವಾರಪೇಟೆ:- ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನುಮುಷ್ತಾಕ್ ಆಹ್ವಾನ ವಿರೋಧಿಸಿ ಇಂದು ಮಂಡಲ ಬಿಜೆಪಿ ಪ್ರತಿಭಟನೆ ನಡೆಸಿತು. ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

 ಈ ಸಂದರ್ಭ ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ ಸಿದ್ದರಾಮಯ್ಯನವರ ಸರ್ಕಾರ ದಸರಾ ಉದ್ಘಾಟನೆಗೆ ಕನ್ನಡ ವಿರೋಧಿ ಭಾನು ಮುಷ್ತಾಕ್ ರವರನ್ನು ಆಹ್ವಾನಿಸುವ ಮೂಲಕ ಈ ನಾಡಿನ ಅಸಂಖ್ಯಾತ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ನಾಡದೇವತೆ ಚಾಮುಂಡೇಶ್ವರಿ ದೇವಾಲಯ ಹಿಂದೂಗಳದಲ್ಲಾ ಎನ್ನುವ ಮೂಲಕ ಈ ನಾಡಿಗೆ ಹಾಗೂ ರಾಜಮನೆತನಕ್ಕೆ ಅಗೌರವ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಭಾನು ಮುಷ್ತಾಕ್ ಈ ನಾಡಿನ ಸಂಪ್ರದಾಯದಂತೆ,ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ದಸರಾ ಉದ್ಘಾಟನೆ ಮಾಡುವುದಾದರೆ ಮಾತ್ರ ಮಾಡಲಿ ಇಲ್ಲವಾದರೆ ನಮ್ಮ ತೀವ್ರವಿರೋದವಿದೆ ಎಂದರು.

 ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಭಾರತೀಶ್ ಮಾತನಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುವ ಮೂಲಕ ಒಂದಲ್ಲಾ ಒಂದು ಯಡವಟ್ಟು ಮಾಡುತ್ತಿದೆ ಎಂದರು.ತಮ್ಮ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಒಂದೊಂದು ಗಂಭೀರ ವಿವಾದಗಳನ್ನು ಹೊರತಂದು ಜನರ ದಿಕ್ಕುತಪ್ಪಿಸುವ ಕೆಲಸಮಾಡುತಿದ್ದಾರೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಜಿ.ಮಾದಪ್ಪ,ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ,ಜಿಲ್ಲಾ ಬಿಜೆಪಿ, ಉಪಾಧ್ಯಕ್ಷರು ಗಳಾದ ಮನುಕುಮಾರ್ ರೈ, ಮಾದಪ್ಪ,ಮಂಡಲ ಅಧ್ಯಕ್ಷ ಗೌತಮ್,ಕಾರ್ಯದರ್ಶಿ ದರ್ಶನ್,ಇಂದಿರಾ ಮೋನಪ್ಪ, ಮೋಕ್ಷಿತ್ ಹಾಗೂ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು.