ಭಾಗಮಂಡಲ: ಸ್ವಂತ ಅಕ್ಕ- ತಂಗಿಯರ ಮಕ್ಕಳ ಮಧ್ಯೆಯೇ ಅಕ್ರಮ ಸಂಬಂಧ;ಕೊಲೆಯಲ್ಲಿ ಅಂತ್ಯ

Mar 12, 2026 - 23:16
 0  2.7k
ಭಾಗಮಂಡಲ: ಸ್ವಂತ ಅಕ್ಕ- ತಂಗಿಯರ ಮಕ್ಕಳ ಮಧ್ಯೆಯೇ ಅಕ್ರಮ ಸಂಬಂಧ;ಕೊಲೆಯಲ್ಲಿ ಅಂತ್ಯ
ಕೊಲೆಯಾದ ಕುಂಞರಾಮ,ಯಶೋಧ & ಆರೋಪಿ ಚಂದು

ಮಡಿಕೇರಿ; ತಾಲೂಕಿನ ಭಾಗಮಂಡಲ ಸಮೀಪದ ಕುಂದಚೇರಿ ಗ್ರಾಮದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯಶೋಧಾ(45) ಹಾಗೂ ಕುಂಞರಾಮ(47) ಕೊಲೆಯಾದ ಜೋಡಿ.

ಈ ಡಬಲ್ ಮರ್ಡರ್ ಕುಂದಚೇರಿ ಗ್ರಾಮವನ್ನೇ ಬೆಚ್ಚಿ ಬೀಳಿಸಿದ್ದು, ಇದೀಗ ಪೊಲೀಸರ ಪ್ರಾಥನಿಕ ತನಿಖೆಯಲ್ಲಿ ಈ ಜೋಡಿ ಕೊಲೆ ರಹಸ್ಯ ಬಯಲಿಗೆ ಬಂದಿದೆ.

 ಹೌದು.. ಸ್ವಂತ ಅಕ್ಕ- ತಂಗಿಯರ ಮಕ್ಕಳ ಮಧ್ಯೆಯೇ ಅಕ್ರಮ ಸಂಬಂಧ ಬೆಳೆದಿದೆ. ಯಶೋಧಾ ಮತ್ತು ಕುಂಞರಾಮ ಇವರಿಬ್ಬರು ಸಂಬಂಧದಲ್ಲಿ ಅಣ್ಣ-ತಂಗಿ. ಆದ್ರೆ, ಈ ಇವರಿಬ್ಬರು ಪವಿತ್ರ ಸಂಬಂಧವನ್ನೇ ಮೀರಿ ಅಕ್ರಮ ಸಂಬಂಧ ಹೊಂದಿದ್ದು, ಬಳಿಕ ಇಬ್ಬರು ಲಿವಿಂಗ್ ಟುಗೆದರ್ನಲ್ಲಿದ್ದರು.

ಇನ್ನು ಹಂತಕ ಚಂದ್ರು ಸಹ ಯಶೋಧಾ ಮತ್ತು ಕುಂಞರಾಮಗೆ ಸಹೋದರನಾಗಬೇಕು. ಆದ್ರೆ, ಯಶೋಧಾ ಮತ್ತು ಕುಂಞರಾಮ ಅಕ್ರಮ ಸಂಬಂಧ ಹೊಂದಿದ್ದರಿಂದ ಆಕ್ರೋಶಗೊಂಡು ಇಬ್ಬರನ್ನು ಕೊಚ್ಚಿ ಕೊಲೆ ಮಾಡಿದ್ದಾನೆ.

ಅಣ್ಣ-ತಂಗಿ ನಡುವೆ ಅಕ್ರಮ ಸಂಬಂಧ;

ನಿನ್ನೆ (ಮಾರ್ಚ್ 11) ಇವರ ಊರಲ್ಲಿ ನಾಮಕರಣ ಸಮಾರಂಭವೊಂದು ನಡೆದಿದೆ. ಅಲ್ಲಿಗೆ ತೆರಳಿದ್ದ ಈ ಮಂದಿ ಗುಂಡು ತುಂಡು ಪಾರ್ಟಿ ಮಾಡಿ ತಮ್ಮ ತಮ್ಮ ಮನೆಗೆ ಮರಳಿದ್ದಾರೆ. ಆದ್ರೆ ರಾತ್ರಿ ಚಂದು ಎಂಬಾತನಿಗೆ ಅದೇನಾಯ್ತೋ ಗೊತ್ತಿಲ್ಲ. ಮಚ್ಚು ಹಿಡಿದು ನೇರವಾಗಿ ತನ್ನ ಮಲಸಹೋದರಿ ಮನೆಗೆ ತೆರಳಿ ಯಶೋಧಳ ಮತ್ತು ಆಕೆಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಕುಂಞರಾಮನನ್ನ ಕೊಚ್ಚಿ ಕೊಲೆ ಮಾಡಿದ್ದಾನೆ.

 ಮಚ್ಚಿನೇಟಿಗೆ ಇಬ್ಬರೂ ಮಲಗಿದ್ದಲ್ಲೇ ಉಸಿರು ಚೆಲ್ಲಿದ್ದಾರೆ. ಇನ್ನು ಎರೆಡು ದೇಹಗಳು ಉರುಳಲು ಕಾರಣ ಮಾತ್ರ ಬಹಳ ವಿಚಿತ್ರವಾಗಿದೆ. ಕೊಲೆಯಾದ ಯಶೋಧ, ಕುಂಞರಾಮ ಮತ್ತು ಕೊಲೆ ಆರೋಪಿ ಚಂದು ಸಂಬಂಧದಲ್ಲಿ ಸಹೋದರಿ ಸಹೋದರರು ಆಗಬೇಕು.

ಹೇಗಂದ್ರೆ ಕೊಲೆಯಾದ ಯಶೋಧಳ ತಾಯಿ, ಕುಂಞರಾಮನ ತಾಯಿ ನಾರಾಯಣಿ ಮತ್ತು ಕೊಲೆ ಆರೋಪಿ ಚಂದುವಿನ ತಾಯಿ ಸ್ವಂತ ಅಕ್ಕ+ತಂಗಿಯರು. ಆದ್ರೆ, ಇಲ್ಲಿ ಸ್ವಂತ ಅಕ್ಕ ತಂಗಿಯರ ಮಕ್ಕಳ ಮಧ್ಯೆಯೇ ಅಕ್ರಮ ಸಂಬಂಧ ಬೆಳೆದಿದೆ.

ಮಲಗಿದ್ದ ಅಣ್ಣ-ತಂಗಿ ಮೇಲೇಳಲೇ ಇಲ್ಲ;

ಕೊಲೆಯಾದ ಕುಂಞಇರಾಮ ಎರಡು ವರ್ಷಗಳ ಹಿಂದೆ ಪತ್ನಿ ಕಲ್ಯಾಣಿಯನ್ನ ತ್ಯಜಿಸಿ ತನ್ನ ಸಹೋದರಿ ಯಶೋಧಳ ಜೊತೆ ಸಂಬಂಧ ಬೆಳೆಸಿದ್ದ. ಎರಡು ವರ್ಷಗಳಿಂದ ಇವರಿಬ್ಬರು ಒಟ್ಟಿಗೆ ನೆಲೆಸಿದ್ದರು. ಇದು ಸಹೋದರ ಸಂಬಂಧಿ ಚಂದುವಿಗೆ ಇಷ್ಟವಿರಲಿಲ್ಲ. ಅಲ್ಲದೇ ಚಂದುವಿಗೆ ಯಶೋಧಳ ಮೇಲೆ ಮನಸ್ಸಿತ್ತು ಎನ್ನಲಾಗಿದೆ. ಇದನ್ನ ಅಲ್ಲಿನವರ ಜೊತೆ ಈ ಹಿಂದೆಯೂ ಬಹಳಷ್ಟು ಬಾರಿ ಹೇಳಿದ್ದನಂತೆ. ಆದ್ರೆ 

ಮಾರ್ಚ್ 11ರಂದು ಕುಡಿದ ಮತ್ತಿನಲ್ಲಿ ಯಶೋಧಳ ಮನೆಗೆ ತೆರಳಿ ನೋಡಿದಾಗ ಯಶೋಧ -ಕುಂಞರಾಮ ಒಟ್ಟಿಗೆ ಇರುವುದು ಕಂಡು ಮತ್ತಷ್ಟು ಆಕ್ರೋಶಗೊಡಿದ್ದು, ಏನು ನೋಡದೇ ಇಬ್ಬರ ಮೇಲೆ ಮನಸೋಇಚ್ಛೆ ಮಚ್ಚಿನಿಂದ ದಾಳಿ ಮಾಡಿದ್ದಾನೆ. ಪರಿಣಾಮ ಮಲಗಿದ್ದ ಯಶೋಧ ಹಾಗೂ ಕುಂಞರಾಮ ಮೇಲೇಳಲೇ ಇಲ್ಲ.

ಈ ಪ್ರಕರಣ ಕೇವಲ ಒಂದು ಅಪರಾಧವಾಗಿ ಮಾತ್ರವಲ್ಲದೆ, ಅಡಿಯ ಜನಾಂಗದ ನಿಕೃಷ್ಟ ಪರಿಸ್ಥಿತಿಯನ್ನ ಬಯಲಿಗೆಳೆದಿದೆ. ಸುಶಿಕ್ಷಿತರಾಗದೇ ಇರುವುದು, ಕಾನೂನಿನ ಕೊರತೆ, ಇವರನ್ನ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಇವೆಲ್ಲವೂ ಕೂಡ ಇದೀಗ ಚರ್ಚೆಗೆ ಗ್ರಾಸ ವಾಗಿದೆ. ಸದ್ಯ ಕೊಲೆ ಆರೋಪಿ ಚಂದುವನ್ನ ಬಂಧಿಸಿರೋ ಭಾಗಮಂಡಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.

What's Your Reaction?

Like Like 2
Dislike Dislike 0
Love Love 2
Funny Funny 0
Angry Angry 0
Sad Sad 2
Wow Wow 0