ಭಾಗಮಂಡಲ:ಮಾ.21 ರಂದು ಜನಸ್ಪಂದನಾ ಕಾರ್ಯಕ್ರಮ

ಭಾಗಮಂಡಲ:ಮಾ.21 ರಂದು ಜನಸ್ಪಂದನಾ ಕಾರ್ಯಕ್ರಮ

ಮಡಿಕೇರಿ; ಮಾ.20:-ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್, 21 ರಂದು ಮಧ್ಯಾಹ್ನ 2 ಗಂಟೆಗೆ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಹೋಬಳಿಯ ಭಾಗಮಂಡಲ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಮಡಿಕೇರಿ ತಾಲ್ಲೂಕು ತಹಶೀಲ್ದಾರರಾದ ಶ್ರೀಧರ ಅವರು ತಿಳಿಸಿದ್ದಾರೆ.