ವಿಜೖಂಭಣೆಯಿಂದ ಜರುಗಿದ ಬೇಂಗೂರು ಗ್ರಾಮದ ಶ್ರೀ ಸುಬ್ರಹ್ಮಣ್ಯ ದೇವಾಲಯದ ಪುನರ್ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ
ಮಡಿಕೇರಿ ಏ. 11 - ಚೇರಂಬಾಣೆ ವ್ಯಾಪ್ತಿಯ ಬೇಂಗೂರು ಗ್ರಾಮದ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಪುನರ್ ಪ್ರತಿಷ್ಟಾ ಹಾಗೂ ಬ್ರಹ್ಮಕಲಶೋತ್ಸವ ನೂರಾರು ಭಕ್ತಾಧಿಗಳ ಸಂಭ್ರಮ, ಭಕ್ತಿಭಾವದೊಂದಿಗೆ ನೆರವೇರಿತು.
ಚೇರಂಬಾಣೆಯಲ್ಲಿನ ಪಟ್ಟಮಾಡ ಕುಟುಂಬದ ಬೇಂಗೂರು ಗ್ರಾಮದಲ್ಲಿರುವ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪುನರ್ ನಿಮಾ೯ಣವಾದ ನೂತನ ಪ್ರಾಸಾದದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಪಂಚಲೋಹ ಬಿಂಬ ಪುನರ್ ಪ್ರತಿಷ್ಟೆ ಹಾಗೂ ಬ್ರಹ್ಮ ಕಲಶಾಭಿಷೇಕವು ಕ್ಷೇತ್ರ ತಂತ್ರಿಗಳಾದ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೖತ್ವದಲ್ಲಿ ಪಟ್ಟಮಾಡ ಕುಟುಂಬದ ಮುಂದಾಳತ್ವದಲ್ಲಿ ಆಯೋಜಿತವಾಗಿತ್ತು.
ಶ್ರೀ ಸುಬ್ರಹ್ಮಣ್ಯ ದೇವರ ಬಿಂಬ ಪ್ರತಿಷ್ಟೆ, ಜೀವಕಲಶಾಭಿಷೇಕ, ಪ್ರಾಣ ಪ್ರತಿಷ್ಟೆ, ಹೋಮಕಲಶಾಭಷೇಕ, ತತ್ವ ಕಲಶಾಭಿಷೇಕ ,ಬ್ರಹ್ಮ ಕಲಶಾಭಿಷೇಕ, ಮಹಾಪೂಜೆಗಳು ನೆರವೇರಿದವು. ಕಾಯ೯ಕ್ರಮಕ್ಕೆ ಆಗಮಿಸಿದ್ದ ನೂರಾರು ಭಕ್ದಾಧಿಗಳಿಗೆ ಮಂತ್ರಾಕ್ಷತೆ, ಪ್ರಸಾದ ವಿತರಣೆ ಜರುಗಿತು.
ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಮಡಿಕೇರಿಯ ಶ್ರೀ ಕುಂದುರುಮೊಟ್ಟೆ ದೇವಾಲಯದ ಟ್ರಸ್ಟಿ ಟಿ.ಪಿ. ರಮೇಶ್, ಮನು ಮೇದಪ್ಪ, ಮಡಿಕೇರಿಯ ಶ್ರೀ ವಿಜಯವಿನಾಯಕ ದೇವಾಲಯದ ಟ್ರಸ್ಟಿ ಜಿ.ಚಿದ್ವಿಲಾಸ್ , ಮೂಡಾ ಅಧ್ಯಕ್ಷ ರಾಜೇಶ್ ಬಿ.ವೈ. ಪಟ್ಟಮಾಡ ಕುಟುಂಬದ ಪಟ್ಟೇದಾರ ಡಿಕ್ಕಾ ಕಾಳಪ್ಪ, ಜೀಣೋ೯ದ್ದಾರ ಸಮಿತಿ ಕಾಯ೯ದಶಿ೯ ಪಟ್ಟಮಾಡ ಬೋಪಣ್ಣ ಪಾಲ್ಗೊಂಡಿದ್ದರು.
ದೇವಾಲಯ ಸಮಿತಿ ಅಧ್ಯಕ್ಷ ಪಟ್ಟಮಾಡ ಪೊನ್ನಪ್ಪ ಮಾಹಿತಿ ನೀಡಿ, ಪುರಾತನ ಕಾಲದ ಶ್ರೀಸುಬ್ರಹ್ಮಣ್ಯ ದೇವರ ಆಲಯದ ಜೀಣೋ೯ದ್ದಾರ ಕಾಯ೯ವನ್ನು 55 ಲಕ್ಷ ರು. ವೆಚ್ಚದಲ್ಲಿ ದಾನಿಗಳ ಕೊಡುಗೆಯೊಂದಿಗೆ ಕೈಗೊಳ್ಳಲಾಗಿದೆ. ಪುರಾತನ ಕಾಲದ ಇತಿಹಾಸವಿರುವ ಈ ದೇವಾಲಯದ ಗಭ೯ಗೖಹದಲ್ಲಿ ಹಳೇ ಕಾಲದಲ್ಲಿ ಪೂಜಿಸಲ್ಪಡುತ್ತಿದ್ದ ದೇವರ ವಿಗ್ರಹಗಳೂ ಪತ್ತೆಯಾಗಿದ್ದವು. ಇದೀಗ ದೇವಾಲಯದ ಜೀಣೋ೯ದ್ದಾರ ಮತ್ತು ಬ್ರಹ್ಮಕಲಶೋತ್ಸವದ ಮೂಲಕ ಗ್ರಾಮದಲ್ಲಿ ಶ್ರೀ ಸುಬ್ರಹ್ಮಣ್ಯ ದೇವಾಲಯವನ್ನು ಮತ್ತೆ ಪುನರ್ ಪ್ರತಿಷ್ಟಾಪಿಸಲಾಗಿದೆ ಎಂದರು.