ಆಂಧ್ರದ ಮಾರ್ಕಪುರಂನಲ್ಲಿ ಹೊತ್ತಿ ಉರಿದ ಬಸ್; 10 ಮಂದಿ ಸಜೀವದಹನ

Mar 26, 2026 - 10:43
Mar 26, 2026 - 10:48
 0  541
ಆಂಧ್ರದ ಮಾರ್ಕಪುರಂನಲ್ಲಿ ಹೊತ್ತಿ ಉರಿದ ಬಸ್; 10 ಮಂದಿ ಸಜೀವದಹನ
Photo credit: TV09

ಮಾರ್ಕಪುರಂ, ಮಾರ್ಚ್ 26: ಇತ್ತೀಚೆಗೆ ಖಾಸಗಿ ಬಸ್​​ಗಳಿಗೆ ಬೆಂಕಿ ಹೊತ್ತಿಕೊಳ್ಳುವ ಪ್ರಕರಣಗಳು ಹೆಚ್ಚಾಗಿದ್ದು, ಆಂಧ್ರಪ್ರದೇಶದಲ್ಲಿ (Andhra Pradesh Bus Accident) ಅದೇ ರೀತಿಯ ಮತ್ತೊಂದು ಪ್ರಕರಣ ನಡೆದಿದೆ. ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಟಿಪ್ಪರ್ ಟ್ರಕ್ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಇದರಿಂದ ಬಸ್ ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಗಿ ಸಂಪೂರ್ಣವಾಗಿ ಸುಟ್ಟುಹೋಗಿದೆ. ಈ ಘಟನೆಯಲ್ಲಿ ಬಸ್​ನೊಳಗಿದ್ದ 10 ಜನರು ಜೀವಂತವಾಗಿ ಸುಟ್ಟು ಕರಕಲಾಗಿದ್ದಾರೆ.

ಇನ್ನುಳಿದವರನ್ನು ರಕ್ಷಿಸಲಾಗಿದ್ದು, ತೀವ್ರವಾಗಿ ಗಾಯಗಳಾಗಿರುವ 18 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೈದರಾಬಾದ್‌ನಿಂದ ಪಾಮೂರ್‌ಗೆ ಹೋಗುತ್ತಿದ್ದ ಖಾಸಗಿ ಟ್ರಾವೆಲ್ ಬಸ್ ಮತ್ತು ಚಿಮಕುರ್ತಿಯಿಂದ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇದರಿಂದಾಗಿ ಬೆಂಕಿ ಹೊತ್ತಿಕೊಂಡು ಎರಡೂ ವಾಹನಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ.

ಹರಿಕೃಷ್ಣ ಖಾಸಗಿ ಟ್ರಾವೆಲ್ ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಅವರಲ್ಲಿ 10 ಮಂದಿ ಸುಟ್ಟು ಕರಕಲಾಗಿದ್ದಾರೆ. 18 ಜನರನ್ನು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು. ಆದರೆ ವಾಹನಗಳು ನಿಯಂತ್ರಣಕ್ಕೆ ಬರುವ ಮೊದಲೇ ವಾಹನಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದವು. ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಕಣಿಗಿರಿ ಮತ್ತು ಪಾಮೂರ್ ಪ್ರದೇಶದ ನಿವಾಸಿಗಳು ಎಂದು ತಿಳಿದುಬಂದಿದೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 2
Wow Wow 0