ಚಂದನ್ ನಂದರಬೆಟ್ಟು ಅವರಿಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ನಾಡೋಜ ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ

ಚಂದನ್ ನಂದರಬೆಟ್ಟು ಅವರಿಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ನಾಡೋಜ ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ

ಕಾಸರಗೋಡು; ಪತ್ರಕರ್ತ, ಸಮಾಜಸೇವಕ ಚಂದನ್ ನಂದರಬೆಟ್ಟು ಅವರಿಗೆ ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ ವೇದಿಕೆಯಲ್ಲಿ ನಾಡೋಜ ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾಮದವರಾದ ನಿವೃತ್ತ ಪೊಲೀಸ್ ಎ ಎಸ್ ಐ, ಕೃಷ್ಣ ಎನ್ ಎಂ ಹಾಗು ಜಯಲಕ್ಷ್ಮಿ ಎನ್ ಕೆ ಅವರ ಪುತ್ರರಾಗಿರುವ ಚಂದನ್ ನಂದರಬೆಟ್ಟು ಸಾಹಿತ್ಯ ಹಾಗೂ ಸಮಾಜಸೇವೆ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ ಈ ಗೌರವ ಲಭಿಸಿದೆ.