ಕೊಯಂಭತ್ತೂರು ವಿಮಾನ ನಿಲ್ದಾಣದ ಬಳಿ ಕಾಲೇಜು ವಿದ್ಯಾರ್ಥಿನಿಯ ಅಪಹರಿಸಿ ಸಾಮೂಹಿಕ ಅ*ತ್ಯಾ*ಚಾರ

ಕೊಯಂಭತ್ತೂರು ವಿಮಾನ ನಿಲ್ದಾಣದ ಬಳಿ ಕಾಲೇಜು ವಿದ್ಯಾರ್ಥಿನಿಯ ಅಪಹರಿಸಿ ಸಾಮೂಹಿಕ ಅ*ತ್ಯಾ*ಚಾರ
Photo credit: INDIA TODAY

ಚೆನ್ನೈ: ಕೊಯಂಭತ್ತೂರು ವಿಮಾನ ನಿಲ್ದಾಣದ ಹತ್ತಿರ ಭಾನುವಾರ ತಡರಾತ್ರಿ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಮೂವರು ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ.

ಕೊಯಂಭತ್ತೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ತನ್ನ ಸ್ನೇಹಿತನೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮೂವರು ಆರೋಪಿಗಳು ಅವರ ವಾಹನವನ್ನು ತಡೆದು ಯುವಕನ ಮೇಲೆ ಹಲ್ಲೆ ನಡೆಸಿ, ಯುವತಿಯನ್ನು ಬಲವಂತವಾಗಿ ಅಪಹರಿಸಿದ್ದಾರೆ. ಬಳಿಕ ಆಕೆಯನ್ನು ಬೇರೆ ಸ್ಥಳಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿ ಪ್ರಸ್ತುತ ಆಸ್ಪತ್ರೆಗೆ ದಾಖಲೆಯಾಗಿದ್ದು, ಅವಳ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಲೈಂಗಿಕ ದೌರ್ಜನ್ಯ ದೃಢವಾಗಿದೆ. ಸಂತ್ರಸ್ತೆಯು ಸುರಕ್ಷಿತಳಾಗಿದ್ದಾಳೆ. ಆರೋಪಿಗಳನ್ನು ಪತ್ತೆಹಚ್ಚಲು ಏಳು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ,” ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪೊಲೀಸರು ಈಗಾಗಲೇ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಸುತ್ತಮುತ್ತಲಿನ ಸಾಕ್ಷಿದಾರರನ್ನು ವಿಚಾರಣೆಗೊಳಪಡಿಸಿದ್ದಾರೆ. ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯಾಚರಣೆ ಜೋರಾಗಿದೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ತಮಿಳುನಾಡಿನಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆ ರಾಜ್ಯದಲ್ಲಿ ತೀವ್ರ ಆತಂಕ ಮೂಡಿಸಿದೆ. ವಿರೋಧ ಪಕ್ಷಗಳು ಸರ್ಕಾರದ ಕಾನೂನು-ಸುವ್ಯವಸ್ಥೆಯ ವೈಫಲ್ಯವನ್ನು ಗಂಭೀರವಾಗಿ ಟೀಕಿಸಿವೆ.