ಐಟಿ ದಾಳಿ ವೇಳೆಯೇ ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ
ಬೆಂಗಳೂರು, ಜ30: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ (C.J. Roy) ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಘಟನೆ ನಗರದ ಹೊಸೂರು ರಸ್ತೆಯ ಲ್ಯಾಂಗ್ಫೋರ್ಡ್ ಟೌನ್ನಲ್ಲಿರುವ ಕಚೇರಿಯಲ್ಲಿ ನಡೆದಿದೆ.
ಸ್ಥಳಕ್ಕೆ ಅಶೋಕ್ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆನೇಕಲ್ನ ನಾರಾಯಣ ಆಸ್ಪತ್ರೆಗೆ ಸಿಜೆ ರಾಯ್ ಶವ ರವಾನಿಸಲಾಗಿದೆ. ಆತ್ಮಹತ್ಯೆಗೆ ಕಾರಣವೇನು? ಸಿ.ಜೆ.ರಾಯ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ರಿಯಲ್ ಎಸ್ಟೇಟ್ ಕಂಪನಿಯನ್ನು ಹುಟ್ಟುಹಾಕಿದ್ದರು. ಪದೇ ಪದೆ ಐಟಿ ಇಲಾಖೆ ಅಧಿಕಾರಿಗಳ ದಾಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.
ಇಂದು ಕೂಡ IT ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಪಿಸ್ತೂಲ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಹೊಸೂರು ರಸ್ತೆಯ ಲ್ಯಾಂಗ್ಫೋರ್ಡ್ ಟೌನ್ನಲ್ಲಿರುವ ಕಚೇರಿ ಮೇಲೆ IT ಇಲಾಖೆ ಅಧಿಕಾರಿಗಳು ಇಂದು ಬೆಳಗ್ಗೆ ಕೂಡ ದಾಳಿ ಮಾಡಿದ್ದರು. ಮಧ್ಯಾಹ್ನ ಕಚೇರಿಗೆ ಬಂದಿದ್ದ ಉದ್ಯಮಿ ಸಿ.ಜೆ.ರಾಯ್, ಒಂದು ಗಂಟೆ ಐಟಿ ವಿಚಾರಣೆ ಎದುರಿಸಿದ್ದಾರೆ. ಅಧಿಕಾರಿಗಳಿಗೆ ಕೆಲ ದಾಖಲೆ ಸಹ ಕೊಟ್ಟಿದ್ದಾರೆ.
ಮತ್ತಷ್ಟು ದಾಖಲೆ ತರಲು ರೂಂಗೆ ಹೋಗಿದ್ದು, ಈ ವೇಳೆ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡಿದ್ದಾರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಿ.ಜೆ.ರಾಯ್ ಕೊನೆಯುಸಿರೆಳೆದಿದ್ದಾರೆ. ಖುದ್ದು ಡಿಸಿಪಿ ಅಕ್ಷಯ್ ಅವರು ತನಿಖೆ ನಡೆಸಿದ್ದು, ಈಗಾಗಲೇ ಫೈರ್ ಮಾಡಿಕೊಂಡ ಪಿಸ್ತೂಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಕಚೇರಿ ಕೊಠಡಿಯಲ್ಲಿನ ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದ್ದಾರೆ.
ಜೊತೆಗೆ ಯಾವುದಾದರೂ ಡೆತ್ ನೋಟ್ ಇದೆಯಾ ಅಥವಾ ಮೊಬೈಲ್ನಲ್ಲಿ ಏನಾದ್ರೂ ಇದೆಯಾ ಅಥವಾ ಯಾರಿಗಾದ್ರೂ ಮೆಸೇಜ್ ಮಾಡಿದ್ದರಾ ಎಂದು ಎಲ್ಲಾ ಆಯಾಮಗಳಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಇನ್ನು ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆಗೆ ಹಿನ್ನೆಲೆ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಿಂದ ಐಟಿ ಅಧಿಕಾರಿಗಳು ವಾಪಸ್ ಆಗಿದ್ದಾರೆ. ಇಂದು ಬೆಳಗ್ಗೆ ದಾಳಿ ಮಾಡಿದ್ದ ಆದಾಯ ತೆರಿಗೆ ಅಧಿಕಾರಿಗಳು 2 ಕಾರುಗಳಲ್ಲಿ 10 ಜನರು ವಾಪಸ್ ಆಗಿದ್ದಾರೆ.