ವಿರಾಜಪೇಟೆ ತಾಲ್ಲೂಕಿನಲ್ಲಿ ಪಂಚ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ನಡೆಸುವ ಕುರಿತು ಶಾಸಕ ಎಎಸ್ ಪೊನ್ನಣ್ಣ ಅವರೊಂದಿಗೆ ಚರ್ಚೆ

ವಿರಾಜಪೇಟೆ ತಾಲ್ಲೂಕಿನಲ್ಲಿ ಪಂಚ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ನಡೆಸುವ ಕುರಿತು ಶಾಸಕ ಎಎಸ್ ಪೊನ್ನಣ್ಣ ಅವರೊಂದಿಗೆ ಚರ್ಚೆ

ವಿರಾಜಪೇಟೆ: ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಪಿ.ವಿ ಜಾನ್ಸನ್ ಹಾಗೂ ಸದಸ್ಯರುಗಳು ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಆವರನ್ನು ಭೇಟಿ ಮಾಡಿ ಚರ್ಚಿಸಿದರು.

 ವಿರಾಜಪೇಟೆ ತಾಲೂಕಿನಲ್ಲಿ ರಾಜ್ಯ ಸರಕಾರದ ಪಂಚ ಭಾಗ್ಯಗಳ ಫಲಾನುಭವಿಗಳ ಪಟ್ಟಿ ಹಾಗೂ ವಿವರಗಳನ್ನು ಶಾಸಕರಿಗೆ ನೀಡಿ, ಮುಂದಿನ ದಿನಗಳಲ್ಲಿ ವಿರಾಜಪೇಟೆ ತಾಲೂಕು ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ನಡೆಸಲು ಅನುಮತಿ ಕೋರಿ ಮನವಿ ಸಲ್ಲಿಸಿದರು. ಮನವಿಯನ್ನು ಪರಿಶೀಲಿಸಿದ ಮಾನ್ಯ ಶಾಸಕರು ಇದೆ ತಿಂಗಳಲ್ಲಿ ತಾಲೂಕು ಮಟ್ಟದ ಸಮಾವೇಶ ಮಾಡಲು ದಿನಾಂಕ ಹಾಗೂ ಸಮಯ ನೀಡುವ ಭರವಸೆ ನೀಡಿದರು.