ಸಹೋದರಿ ಬೇರೆ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಿದಕ್ಕೆ ಸಹೋದರ ಮಾಡಿದ್ದೇನು ಗೊತ್ತಾ!!

Feb 18, 2026 - 23:21
 0  1.7k
ಸಹೋದರಿ ಬೇರೆ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಿದಕ್ಕೆ ಸಹೋದರ ಮಾಡಿದ್ದೇನು ಗೊತ್ತಾ!!
ಪ್ರಾತಿನಿಧಿಕ ಚಿತ್ರ

ಕೊಪ್ಪಳ, (ಫೆಬ್ರವರಿ 18): ಕೊಪ್ಪಳ (Koppal) ತಾಲೂಕಿನ ಹಂದ್ರಾಳ ಗ್ರಾಮದಲ್ಲಿ ಮರ್ಯಾದೆ ಹತ್ಯೆ ಯತ್ನ (honor killing) ನಡೆದಿರುವ ಘಟನೆ ನಡೆದಿದೆ. ಸಹೋದರಿ ಬೇರೆ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಸಹೋದರ ಆಕೆಯನ್ನು ಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ನಾಲ್ಕು ತಿಂಗಳು ಗರ್ಭಿಣಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

23 ವರ್ಷದ ಮೀನಾಕ್ಷಿ ಕಳೆದ ಎರಡು ವರ್ಷಗಳ ಹಿಂದೆ ST ಸಮುದಾಯದ ಯುವಕನನ್ನ ಪ್ರೀತಿಸಿ ಮದುವೆಯಾಗಿದ್ದು, ಸದ್ಯ ಮೀನಾಕ್ಷಿ ನಾಲ್ಕು ತಿಂಗಳು ಗರ್ಭಿಣಿ. ಇದನ್ನು ಲೆಕ್ಕಿಸದ ಸಹೋದರ ಮಂಜುನಾಥ್ ಎನ್ನುವಾತ ಮೀನಾಕ್ಷಿಯನ್ನು ಕೊಡಲಿಯಿಂದ ಕೊಚ್ಚಿ ಹತ್ಯೆಗೆ ಯತ್ನಿಸಿದ್ದಾನೆ

. ಅದೃಷ್ಟವಶಾತ್ ಮೀನಾಕ್ಷಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಕೊಪ್ಪಳ ಜಿಲ್ಲೆ ಕುಕನೂರ ತಾಲೂಕಿನ ಚಿತ್ತಾಪೂರದ ಕುರುಬ ಸಮುದಾಯದ ಮೀನಾಕ್ಷಿ ಕುಟುಂಬದ ವಿರೋಧದ ನಡುವೆಯೂ ಎರಡು ವರ್ಷಗಳ ಹಿಂದೆ ಹಂದ್ರಾಳ ಗ್ರಾಮದ ಉದಯ ಎನ್ನುವ ST ಸಮುದಾಯದ ಯುವಕನನ್ನ ಪ್ರೀತಿಸಿ ಮದುವೆಯಾಗಿದ್ದಳು.

 ಇದರಿಂದ ಮೀನಾಕ್ಷಿ ಸಹೋದರ ಮಂಜುನಾಥ್ ಕೆರಳಿದ್ದು, ಸಿಟ್ಟಿನಲ್ಲೇ ಇದ್ದ. ಆದ್ರೆ, ಇಂದು (ಫೆಬ್ರವರಿ 18) ಮೀನಾಕ್ಷಿ ಪತಿ ಉದಯ ಸಹೋದರನ ಮದುವೆ ಇದ್ದರಿಂದ ಹಂದ್ರಾಳ ಗ್ರಾಮಕ್ಕೆ ಬಂದಿದ್ದರು.

ಈ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಳವಂಡಿ ಪೊಲೀಸರು ದೌಡಾಯಿಸಿ, ಸಹೋದರಿಯನ್ನು ಕೊಲೆ ಮಾಡಲು ಯತ್ನಿಸಿದ್ದ ಸಹೋದರ ಮಂಜುನಾಥನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಕುಟುಂಬದ ವಿರೋಧದ ನಡುವೆ ಅನ್ಯ ಜಾತಿ ಯುವಕನೊಂದಿಗೆ ಮದುವೆಯಾಗಿದ್ದಕ್ಕೆ ಕೋಪಗೊಂಡು ಸಹೋದರಿಯನ್ನು ಹತ್ಯೆಗೆ ಯತ್ನಿಸಿದ್ದಾನೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

What's Your Reaction?

Like Like 1
Dislike Dislike 1
Love Love 0
Funny Funny 1
Angry Angry 0
Sad Sad 3
Wow Wow 0