ಕೌಟುಂಬಿಕ ಕಲಹ:ಹೆತ್ತ ತಂದೆ-ತಾಯಿಯನ್ನೇ ಕೊಂದ ಮಗ

ಕೌಟುಂಬಿಕ ಕಲಹ:ಹೆತ್ತ ತಂದೆ-ತಾಯಿಯನ್ನೇ ಕೊಂದ ಮಗ

ಬೆಂಗಳೂರು, (ಫೆಬ್ರವರಿ 11): ಪುತ್ರನೇ ತನ್ನ ಹೆತ್ತ ತಂದೆ ಹಾಗೂ ತಾಯಿಯನ್ನು (Father And Mother) ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

 ನವೀನ್ ಚಂದ್ರ ಭಟ್(60), ಡಾ.ಶ್ಯಾಮಲಾ ಭಟ್(55) ಕೊಲೆಯಾದವರು.

ಕೊಲೆಯಾದ ನವೀನ್ ಚಂದ್ರ ಭಟ್ ನೌಕಾಪಡೆಯ ನಿವೃತ್ತ ಕ್ಯಾಪ್ಟನ್‌ ಆಗಿದ್ದರೆ, ಡಾ.ಶ್ಯಾಮಲಾ ಭಟ್ ದಂತ ವೈದ್ಯೆಯಾಗಿದ್ದರು. ಕೌಟುಂಬಿಕ ವಿಚಾರಕ್ಕೆ ಪುತ್ರ ರೋಹನ್ ಭಟ್(33) ಈ ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದ್ದು, ಸದ್ಯ ಹಂತಕ ರೋಹನ್ ಭಟ್ ನನ್ನು ಹೆಚ್‌ಎಎಲ್‌ ಪೊಲೀಸರು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. 

ತಂದೆ ಚಂದ್ರ ಭಟ್(60) ಹಾಗೂ ತಾಯಿ ಡಾ.ಶ್ಯಾಮಲಾ ಭಟ್(55) ಜೊತೆ ಪುತ್ರ ರೋಹನ್ ಭಟ್ ಬೆಂಗಳೂರಿನ ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು.

ಆದ್ರೆ, ಕೌಟುಂಬಿಕ ವಿಚಾರಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದ್ದು, ಕೋಪದಲ್ಲಿ ತಂದೆ ತಾಯಿಗೆ ಚಾಕುವಿನಿಂದ ಚುಚ್ಚಿದ್ದಾನೆ. ಬಳಿಕ ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

 ಮೃತ ದಂಪತಿಯ ಪುತ್ರಿ ಅಮೆರಿಕಾದಲ್ಲಿದ್ದು, ಇಂದು  ಬೆಂಗಳೂರಿಗೆ ಆಗಮಿಸಲಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆ ನಡೆಯಲಿದೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಇಬ್ಬರ ಶವ ಬೌರಿಂಗ್ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ. ಆದ್ರೆ, ಕೊಲೆ ಮಾಡುವಷ್ಟು ಏನಾಗಿತ್ತು ಎನ್ನುವುದೇ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಹೆಚ್‌ಎಎಲ್‌ ಪೊಲೀಸರು ಹಂತಕ ಮಗ ರೋಹನ್ ಭಟ್ ನನ್ನು ಬಂಧಿಸಿದ್ದು, ತನಿಖೆ ನಡೆಸಿದ್ದಾರೆ.