ಕೊಡಗು ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ

ಕೊಡಗು ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ

ಮಡಿಕೇರಿ;ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಅರವತೋಕ್ಲು ಗ್ರಾಮದ 46 ವರ್ಷದ PG ಡಾಲು ಅವರ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಅವರ ಕುಟುಂಬದವರು ನಿರ್ಧಾರವನ್ನು ತೆಗೆದುಕೊಂಡು ಅಂಗಾಂಗ ದಾನಕ್ಕೆ ಸಹಕರಿಸಿ,ಮಾನವೀಯತೆ ಮೆರೆದಿದ್ದಾರೆ. ಇದರಿಂದ ಅನೇಕ ರೋಗಿಗಳಿಗೆ ಜೀವದಾನ ದೊರಕಲಿದೆ‌.

ದಾನಿಯಾದ ವ್ಯಕ್ತಿಯ ಮೂತ್ರಪಿಂಡ ಕಣ್ಣುಗಳು ಹೃದಯ ಕವಾಟಗಳು ಸೇರಿದಂತೆ ವೈದ್ಯಕೀಯ ನಿಯಮಾನುಸಾರ ಮೈಸೂರಿನ ವೈದ್ಯಕೀಯ ತಂಡವು ಅಂಗಾಂಗಗಳನ್ನು ಮರುಪಡೆದುಕೊಂಡರು.

ಈ ಅಂಗಗಳನ್ನು ಮೈಸೂರಿನ ಜೆಎಸ್ಎಸ್ ಮತ್ತು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಕೊಂಡೊಯ್ದು ಅಗತ್ಯವಿರುವ ರೋಗಿಗಳಿಗೆ ಪ್ರತಿರೂಪಣೆ ಮಾಡಲಾಗುವುದು ಎಂದು ಕೊಡಗು ಮೆಡಿಕಲ್ ಕಾಲೇಜು ಡೀನ್ ಡಾ ಲೋಕೇಶ್. ಸರ್ಜನ್ ಡಾ. ಸೋಮಶೇಖರ್ ಮತ್ತು ಡಾ. ನಂಜುಂಡಸ್ವಾಮಿ ಮಾಹಿತಿ ನೀಡಿದ್ದಾರೆ. ಆರೋಗ್ಯ ಇಲಾಖೆ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ವೈದ್ಯಕೀಯ ತಂಡವು ದಾನಿದಾರರ ಕುಟುಂಬದ ಮಾನವೀಯ ಮನೋಭಾವವನ್ನು ಶ್ಲಾಘಿಸಿದೆ .