ದುಬಾರೆಯಲ್ಲಿ ನೂತನ ತೂಗುಸೇತುವೆ ಕಾಮಗಾರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಚಾಲನೆ

ದುಬಾರೆಯಲ್ಲಿ ನೂತನ ತೂಗುಸೇತುವೆ ಕಾಮಗಾರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಚಾಲನೆ

ಕುಶಾಲನಗರ ಮೇ 06: ದುಬಾರೆ ಸಾಕಾನೆ ಶಿಬಿರಕ್ಕೆ ತೆರಳಲು ಕಾವೇರಿ ನದಿಗೆ ಅಡ್ಡಲಾಗಿ ತೂಗುಸೇತುವೆ ನಿರ್ಮಾಣ ಕಾಮಗಾರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೂಮಿಪೂಜೆ ನೆರವೇರಿಸಿದರು.

ಅರಣ್ಯ ಇಲಾಖೆ ವತಿಯಿಂದ ಲೋಕೋಪಯೋಗಿ ಇಲಾಖೆ ಮೂಲಕ 7.30 ಕೋಟಿ ವೆಚ್ಚದಲ್ಲಿ 195 ಮೀ ಉದ್ದದ ತೂಗು ಸೇತುವೆ ನಿರ್ಮಾಣ ಕಾರ್ಯ ನಡೆಯಲಿದೆ. ಮುಂದಿನ 11 ತಿಂಗಳಲ್ಲಿ ಸೇತುವೆ ಪೂರ್ಣಗೊಳಿಸುವ ಯೋಜನೆ ಹೊಂದಲಾಗಿದೆ. ಈ ಸಂದರ್ಭದಲ್ಲಿ ಶಾಸಕ ಡಾ.ಮಂತರ್ ಗೌಡ,ಮತ್ತಿತರರು ಇದ್ದರು.