ಕನ್ನಡ ಸಾಹಿತ್ಯ ಪರಿಷತ್ ಭವನಕ್ಕೆ ಸಂಪೂರ್ಣ ಸಹಕಾರ: ಶಾಸಕ ಎ.ಎಸ್ ಪೊನ್ನಣ್ಣ ಭರವಸೆ

ಮಡಿಕೇರಿ(Coorgdaily):ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗಾಗಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಇರುವ ನಿವೇಶನದಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣದ ಸಲುವಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣ ರವರನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳು ಜಿಲ್ಲಾಧ್ಯಕ್ಷ ಎಂ.ಪಿ ಕೇಶವ ಕಾಮತ್ ನೇತೃತ್ವದಲ್ಲಿ ಭೇಟಿಯಾಗಿ ಭವನ ನಿರ್ಮಾಣ ಸಮಿತಿಯ ಮಹಾಪೋಷಕರಾಗಿ ಕಾರ್ಯನಿರ್ವಹಿಸುವಂತೆ ಮತ್ತು ಭವನ ನಿರ್ಮಾಣದ ಕಾರ್ಯದಲ್ಲಿ ಸಹಕರಿಸುವಂತೆ ಕೋರಿಕೊಂಡರು.
ಪ್ರತಿಕ್ರಿಯಿಸಿದ ಶಾಸಕರು,ಕನ್ನಡ ಸಾಹಿತ್ಯ ಪರಿಷತ್ತಿನ ಭವನಕ್ಕೆ ಸಂಪೂರ್ಣ ಸಹಕಾರ ನೀಡುವುದರೊಂದಿಗೆ ಸರಕಾರದ ಮಟ್ಟದಲ್ಲಿ ಮುಖ್ಯಮಂತ್ರಿಗಳಿಂದ ಅನುದಾನ ಕೊಡಿಸುವುದಲ್ಲದೆ ಜಿಲ್ಲಾಮಟ್ಟದಲ್ಲಿಯೂ ಸಂಪೂರ್ಣವಾಗಿ ಸಹಕರಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಉಪಸ್ಥಿತರಿದ್ದರು.
ನಿಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್, ಗೌರವ ಕಾರ್ಯದರ್ಶಿ ಎಸ್.ಐ ಮುನಿರ್ ಅಹಮದ್, ರೇವತಿ ರಮೇಶ್, ಕೋಶಾಧಿಕಾರಿ, ಎಸ್.ಎಸ್ ಸಂಪತ್ ಕುಮಾರ್, ವಿರಾಜಪೇಟೆ ತಾಲೂಕು ಅಧ್ಯಕ್ಷರಾದ ಡಿ ರಾಜೇಶ್ ಪದ್ಮನಾಭ, ಕುಶಾಲನಗರ ತಾಲೂಕು ಅಧ್ಯಕ್ಷರಾದ ಕೆ.ಎಸ್.ನಾಗೇಶ್, ಪೊನ್ನಂಪೇಟೆ ಹೋಬಳಿ ಅಧ್ಯಕ್ಷರಾದ ಕುಲ್ಲಚಂಡ ಪ್ರಮೋದ್ ಗಣಪತಿ, ಮಾಜಿ ಅಧ್ಯಕ್ಷರಾದ ಬಿ.ಎನ್ ಪ್ರಕಾಶ್ ಉಪಸ್ಥಿತರಿದ್ದರು.