ಗೋಣಿಕೊಪ್ಪ:ಪೂರ್ಣಗೊಂಡ ನೂತನ ಬಸ್ಸ್ ತಂಗುದಾಣದ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಎಎಸ್ ಪೊನ್ನಣ್ಣ

ಗೋಣಿಕೊಪ್ಪ:ಪೂರ್ಣಗೊಂಡ ನೂತನ ಬಸ್ಸ್ ತಂಗುದಾಣದ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಎಎಸ್ ಪೊನ್ನಣ್ಣ

ಗೋಣಿಕೊಪ್ಪ; ನಿರ್ಮಾಣ ಆಗುತ್ತಿರುವ ನೂತನ ಬಸ್ ನಿಲ್ದಾಣದ ಪೂರ್ಣಗೊಂಡ ಕಾಮಗಾರಿಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಪೊನ್ನಣ್ಣ ರವರು ಇಂದು ವೀಕ್ಷಿಸಿದರು.

 ಸದ್ಯದಲ್ಲೇ ನೂತನ ಸುಸರ್ಜಿತ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ಮಾನ್ಯ ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರು ಮಿದೇರಿರ ನವೀನ್, ಪ್ರಧಾನ ಕಾರ್ಯದರ್ಶಿ ಎ ಜೆ ಬಾಬು, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷರು ಪ್ರಮೋದ್ ಗಣಪತಿ, ಉಪಾಧ್ಯಕ್ಷರು ಮಂಜುಳಾ, ಪಕ್ಷದ ಮುಖಂಡರು ಅಣ್ಣಳ್ಳಮಾಡ ಹರೀಶ್ ಪೂವಯ್ಯ, ಮುನ್ನ, ಪ್ರವೀಣ್, ಪೊನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು ಮಲ್ಲಂಡ ಧ್ಯಾನ್ ದೇವಯ್ಯ, ಕುಟ್ಟ ವಲಯ ಯುವ ಕಾಂಗ್ರೆಸ್ ಅಧ್ಯಕ್ಷರು ಫಾರ್ದಿನ್, ಸಾಜಿ, ಪಿ ಡಿ ಓ ತಿಮ್ಮಯ್ಯ, ವಿಜಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.