ದೇವರಕೊಲ್ಲಿ ಶ್ರೀಚಾಮುಂಡೇಶ್ವರಿ ದೇವಾಲಯದ ನೂತನ ಕಲಾಮಂದಿರಕ್ಕೆ ಭೂಮಿಪೂಜೆ; ಸಂಸ್ಕೖತಿ ಸಂರಕ್ಷಣೆಯಲ್ಲಿ ದೇವಾಲಯಗಳು ವಹಿಸುವ ಪಾತ್ರ ಮಹತ್ವದ್ದು -; ಅನಿಲ್ ಹೆಚ್.ಟಿ.

ದೇವರಕೊಲ್ಲಿ ಶ್ರೀಚಾಮುಂಡೇಶ್ವರಿ ದೇವಾಲಯದ ನೂತನ ಕಲಾಮಂದಿರಕ್ಕೆ ಭೂಮಿಪೂಜೆ;    ಸಂಸ್ಕೖತಿ ಸಂರಕ್ಷಣೆಯಲ್ಲಿ ದೇವಾಲಯಗಳು ವಹಿಸುವ ಪಾತ್ರ ಮಹತ್ವದ್ದು -; ಅನಿಲ್ ಹೆಚ್.ಟಿ.

ಮಡಿಕೇರಿ ಜ.13 - ಪ್ರಾಚೀನ ಕಾಲದಿಂದಲೂ ನಮ್ಮ ಕಲೆ, ಸಂಸ್ಕೖತಿ ಸಂರಕ್ಷಣೆಯಲ್ಲಿ ದೇವಾಲಯಗಳು ಪ್ರಮುಖ ಪಾತ್ರ ವಹಿಸಿದ್ದು, ಹೀಗಾಗಿಯೇ ಭಾರತದಲ್ಲಿ ಆಲಯಗಳು ಕಲೋಪಾಸನ ಕೇಂದ್ರಗಳಾಗಿಯೂ ಕಂಗೊಳಿಸಿವೆ ಎಂದು ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಹೇಳಿದ್ದಾರೆ.

ದೇವರಕೊಲ್ಲಿಯ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಉದ್ದೇಶಿತ ಶ್ರೀ ಚಾಮುಂಡೇಶ್ವರಿ ಕಲಾಮಂದಿರಕ್ಕೆ ಭೂಮಿಪೂಜೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅನಿಲ್, ವಿದೇಶಗಳಲ್ಲಿ ನೆಲಸಿರುವ ಭಾರತೀಯರು ತಮ್ಮ ದೇಶದ ಸಂಸ್ಕೖತಿ, ಆಚಾರ ವಿಚಾರಗಳನ್ನು ಮಕ್ಕಳಿಗೆ ಕಲಿಸುವಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಾರೆ. ವಿದೇಶದ ನೆಲದಲ್ಲಿ ಇರುವವರಿಗೆ ಭಾರತದ ಸಂಸ್ಕೖತಿಯ ಮಹತ್ವದ ಅರಿವಾಗುತ್ತದೆ. ಭಾರತದಲ್ಲಿ ಭಜನೆ, ಹಾಡು, ನೖತ್ಯ, ಯೋಗ, ಧ್ಯಾನಗಳ ಮೂಲಕ ಸಾಂಸ್ಕೖತಿಕ ಕೇಂದ್ರಗಳಾಗಿಯೂ ದೈವಿಕ ಕೇಂದ್ರಗಳು ರೂಪುಗೊಂಡಿವೆ ಎಂದರಲ್ಲದೇ, ಮಕ್ಕಳಿಗೆ ಧಾಮಿ೯ಕ ಶಿಕ್ಷಣ ಕಲಿಸುವಲ್ಲಿ ದೇವಾಲಯಗಳ ಕಲಾಮಂದಿರಗಳು ಪ್ರಮುಖ ಪಾತ್ರ ವಹಿಸಬೇಕೆಂದು ಸಲಹೆ ನೀಡಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಅಧ್ಯಕ್ಷರಾಗಿದ್ದ ಕೇಶವಪ್ರಸಾದ್ ಮುಳಿಯ ದೇವಾಲಯದ ಮೂಲಕ ಧಾಮಿ೯ಕ ಶಿಕ್ಷಣದಂಥ ವಿನೂತನ ಕಾಯ೯ಕ್ರಮ ಆಯೋಜಿಸಿದ್ದನ್ನು ಸ್ಮರಿಸಿದ ಅನಿಲ್ ಹೆಚ್.ಟಿ. ಇಂಥ ಧಮ೯ಶಿಕ್ಷಣವನ್ನು ಮಕ್ಕಳಿಗೆ ಕಲಿಸುವಲ್ಲಿ ತಾಯದಿಂದರ ಪಾತ್ರವೂ ಮಹತ್ವದ್ದಾಗಿದೆ ಎಂದರು.

 ಶ್ರೀ ಚಾಮುಂಡೇಶ್ವರಿ ಕಲಾಮಂದಿರದ ಮೂಲಕ ಗ್ರಾಮೀಣ ಭಾಗದ ಸಾಂಸ್ಕೖತಿಕ ಪ್ರತಿಭೆಗಳಿಗೆ ಉತ್ತಮ ವೇದಿಕೆ ದೊರಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅನಿಲ್, ದೇವಾಲಯಕ್ಕೆ ಕೆಲವು ಕಿ.ಮೀ. ದೂರರವಿರುವಂತೆಯೇ ದೇವಾಲಯದ ಮಹತ್ವ ಸಾರುವ ಫಲಕಗಳನ್ನು ಅಳವಡಿಸಿದರೆ ಭಕ್ತರಿಗೆ ಪ್ರಯೋಜನವಾಗುತ್ತದೆ ಎಂದು ಸಲಹೆ ನೀಡಿದರು.

 ಶ್ರೀಚಾಮುಂಡೇಶ್ವರಿ ದೇವಿಯೇ ತನಗೆ ಬೇಕಾದ ದೇವಾಲಯಕ್ಕಾಗಿನ ಭೂಮಿಯನ್ನು ಪ್ರಾಕೖತ್ತಿಕವಾಗಿ ಪಡೆದುಕೊಂಡ ಪವಾಡ ಹೊಂದಿರುವ 850 ವಷ೯ಘಳ ಇತಿಹಾಸವುಳ್ಳ ದೇವಾಲಯದ ಕಲಾಮಂದಿರ ವಿಳಂಭರಹಿತವಾಗಿ ನಿಮಾ೯ಣವಾಗಲಿ ಎಂದೂ ಅವರು ಆಶಿಸಿದರು. ಮೈಸೂರಿನ ಉದ್ಯಮಿ ಚೆರಿಯಮನೆ ನರೇಶ್ ಮಾತನಾಡಿ, ಪ್ರತೀಯೊಂದನ್ನೂ ಸಂಭ್ರಮದಿಂದ ಆಚರಿಸುವ ಮಹತ್ವದ ಗುಣ ಭಾರತೀಯರಲ್ಲಿದೆ. ಹೀಗಾಗಿಯೇ ಸಂಕ್ರಾಂತಿ ಸೇರಿದಂತೆ ಭಾರತದ ಹಬ್ಬಗಳೆಲ್ಲವೂ ಮನೆಮಂದಿಯ ಸಂಭ್ರಮವನ್ನು ಒಳಗೊಂಡಿರುತ್ತದೆ. ಸ್ಥಳೀಯರನ್ನು ಒಗ್ಗೂಡಿಸುವ ಗುಣ ಹಬ್ಬಗಳಿಗಿದೆ ಎಂದರು.

 ಶ್ರೀಚಾಮುಂಡೇಶ್ವರಿ ಕಲಾಮಂದಿರವು ಸಾಂಸ್ಕೖತಿಕ ಮಾತ್ರವಲ್ಲದೇ ಸ್ಥಳೀಯ ಜನಪದವನ್ನೂ ಪ್ರೋತ್ಸಾಹಿಸಲು ವೇದಿಕೆ ನೀಡಲಿ ಮತ್ತು ಪ್ರಕೖತ್ತಿಗೂ ಗೌರವ ನೀಡುವ ಕೇಂದ್ರವಾಗಲಿ ಎಂದೂ ನರೇಶ್ ಹಾರೈಸಿದರು.

ಶ್ರೀ ಚಾಮುಂಡೇಶ್ವರಿ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಬಿ.ಜೆ.ಯಶೋಧರ ಮಾತನಾಡಿ, ಪ್ರಕೖತ್ತಿ ಸೌಂದಯ೯ದ ನಡುವಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ 80 ಲಕ್ಷ ರು. ವೆಚ್ಚದಲ್ಲಿ ಕಲಾಮಂದಿರ ನಿಮಾ೯ಣವನ್ನು 1 ವಷ೯ದೊಳಗೆ ಮುಕ್ತಾಯಗೊಳಿಸಲಾಗುತ್ತದೆ. ಈ ಮೂಲಕ ಭಜನೆ, ಯೋಗ, ಪ್ರಾಣಾಯಾಮ, ಬಾಲಸಂಸ್ಕಾರ, ಧಾಮಿ೯ಕ ಪ್ರವಚನಗಳಿಗೆ ಈ ಕೇಂದ್ರದಲ್ಲಿ ಅವಕಾಶ ನೀಡಲಾಗುತ್ತದೆ ಎಂದರು.

ಶ್ರೀಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೖದ್ದಿ ಯೋಜನೆಯ ಮಡಿಕೇರಿ ತಾಲೂಕಿನ ಜ್ಞಾನ ವಿಕಾಸ ಸಮನ್ವಯಾಧಿಕಾರಿ ವಿಮಲ, ದೇವಾಲಯ ಆಡಳಿತ ಮಂಡಳಿ ಉಪಾಧ್ಯಕ್ಷ ಕೆ.ಆರ್. ರಾಜು ವೇದಿಕೆಯಲ್ಲಿದ್ದರು. ವಿಠಲ ನಿರೂಪಿಸಿದರು. ಮಕರಸಂಕ್ರಾಂತಿ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆ, ಅನ್ನಸಂತಪ೯ಣೆ ಜರುಗಿತು. ಈ ವ್ಯಾಪ್ತಿಯ ಗ್ರಾಮಗಳ ನೂರಾರು ಭಕ್ತರು ಪಾಲ್ಗೊಂಡಿದ್ದರು.