ಜಿಲ್ಲೆಯಲ್ಲಿ ಬಿರುಸುಗೊಂಡ ಮಳೆ:ಕಡಗದಾಳು ಸಮೀಪ ಮರಬಿದ್ದು ರಸ್ತೆ ಸಂಚಾರಕ್ಕೆ ತೊಡಕು
ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿದ್ದು, ಮಳೆಯಿಂದಾಗಿ ಚೆಟ್ಟಳ್ಳಿ-ಮಡಿಕೇರಿ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಕಡಗದಾಳು ಸಮೀಪ ಬೃಹತ್ ಮರಬಿದ್ದು ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಮರಬಿದ್ದು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು ಈ ಭಾಗದಲ್ಲಿ ವಿದ್ಯುತ್ ಪೂರೈಕೆ ಕೂಡ ವ್ಯತ್ಯಯಗೊಂಡಿದೆ.

