ಹಾಕಿ ಕೊಡಗಿನ ಮನೆಮನೆಗಳಲ್ಲಿ ಮಾತಾಗಿದೆ;ಶಾಸಕ ಎಎಸ್ ಪೊನ್ನಣ್ಣ
ಪೊನ; ರಾಜ್ಯಮಟ್ಟದ ಅಂತರ್ ಕಾಲೇಜ್ ಹಾಕಿ ಪಂದ್ಯಾಟದ ಮುಖ್ಯ ಅತಿಥಿಯಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.
ಪೊನ್ನಂಪೇಟೆಯ ಟರ್ಫ್ ಮೈದಾನದಲ್ಲಿ ಈ ಪಂದ್ಯಕೂಟ ಆಯೋಜನೆಗೊಂಡಿತ್ತು. ಪಂದ್ಯಾಟಕ್ಕೆ ಶುಭ ಕೋರಿ ಮಾತನಾಡಿದ ಶಾಸಕರು, ಕೊಡಗಿನ ಮನೆಮನೆಗಳಲ್ಲಿ ಹಾಸು ಹೊಕ್ಕಿರುವ ಹಾಕಿ ಕ್ರೀಡೆಯ ರಾಜ್ಯಮಟ್ಟದ ಪಂದ್ಯಾವಳಿಯು ಪೊನ್ನಂಪೇಟೆಯಲ್ಲಿ ನಡೆಯುತ್ತಿರುವುದು ಸಂತಸ ತಂದಿದೆ. ರಾಜ್ಯದ ಮೂಲೆ ಮೂಲೆಯಿಂದ ಬಂದಿರುವ ಕಾಲೇಜ್ ವಿದ್ಯಾರ್ಥಿಗಳು ಕೊಡಗಿನ ಪರಿಸರಕ್ಕೆ ಹೊಂದಿಕೊಂಡು ತಮ್ಮ ಚಾಕಚಕ್ಯತೆ ಪ್ರದರ್ಶಿಸುತ್ತಿರುವುದು ಹಾಗೂ ಪ್ರಶಸ್ತಿಗಾಗಿ ಹೋರಾಟ ಮಾಡುತ್ತಿರುವುದು ಕೊಡಗಿಗೆ ಹೆಮ್ಮೆ ಎನಿಸಿದೆ. ಎಲ್ಲರೂ ಉತ್ತಮವಾಗಿ ಆಡಿ, ಈ ಕ್ರೀಡೆಯನ್ನು ಮತ್ತಷ್ಟು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಇಂತಹ ಪಂದ್ಯವಳಿಗಳು ಮತ್ತಷ್ಟು ನಡೆಯಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಶ್ರೀ ಮಿದೇರೀರ ನವೀನ್, ಹಿರಿಯರಾದ ಮುಕಳೇರ ಕುಶಾಲಪ್ಪ, ಪ್ರಾಂಶುಪಾಲರು ಬೆನೆಡಿಕ್ಟ್ ಆರ್. ಸಲ್ದಾನ, ಹಾಗೂ ಕ್ರೀಡಾಪಟ್ಟುಗಳು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.