ನಾಳೆ ಗಾಂಧಿ ಗ್ರಾಮ ಪ್ರಶಸ್ತಿ ಪಡೆಯಲಿರುವ ಹೊದ್ದೂರು ಗ್ರಾಮ ಪಂಚಾಯಿತಿ

ನಾಳೆ ಗಾಂಧಿ ಗ್ರಾಮ ಪ್ರಶಸ್ತಿ ಪಡೆಯಲಿರುವ ಹೊದ್ದೂರು ಗ್ರಾಮ ಪಂಚಾಯಿತಿ
ಹಂಸ ಕೊಟ್ಟಮುಡಿ

ಕುಶಾಲನಗರ, ನ 30: 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದ್ದ ನಂಜರಾಯಪಟ್ಟಣ ಗ್ರಾಮಪಂಚಾಯ್ತಿಗೆ ನಾಳೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಡಿ.01 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾನ್ಯ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದ್ದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ಹೊದ್ದೂರು ಗ್ರಾಪಂ ಅಧ್ಯಕ್ಷ ಎಚ್.ಎ ಹಂಸ ಕೊಟ್ಟಮುಡಿ, ಪಿಡಿಓ ಅಬ್ದುಲ್ಲಾ ಅವರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ.