ಕುಶಾಲನಗರದಲ್ಲಿ ಗೃಹ ಸಚಿವರಿಗೆ ಅದ್ಧೂರಿ ಸ್ವಾಗತ
ಕುಶಾಲನಗರ, ಫೆ 15: ಸುಂಟಿಕೊಪ್ಪದಲ್ಲಿ ಪೊಲೀಸ್ ವಸತಿ ಗೃಹ ಉದ್ಘಾಟನೆಗೆ ಕೊಡಗಿಗೆ ಆಗಮಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಕೊಡಗು ಕಾಂಗ್ರೆಸ್ ವತಿಯಿಂದ ಕುಶಾಲನಗರ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಜೆಸಿಬಿಮೇಲದ ಹೂಮಳೆಗೆರೆದು ಗೃಹ ಸಚಿವರನ್ನು ಬರಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಡಾ.ಮಂತರ್ ಗೌಡ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಪಿ ಶಶಿಧರ್,ಕೆಪಿ ಚಂದ್ರಕಲಾ ಹಾಗೂ ಇನ್ನಿತರರು ಇದ್ದರು.