ಇಂದು ಚೋಕಂಡಳ್ಳಿಯಲ್ಲಿ ಹೊನಲು ಬೆಳಕಿನ ಗ್ರಾಮಾಂತರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಇಂದು ಚೋಕಂಡಳ್ಳಿಯಲ್ಲಿ ಹೊನಲು ಬೆಳಕಿನ ಗ್ರಾಮಾಂತರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ವಿರಾಜಪೇಟೆ:ಸಮೀಪದ ಚೋಕಂಡಳ್ಳಿ FANTASY 4 ಇವರ ಆಶ್ರಯದಲ್ಲಿ ಮೂರನೇ ವರ್ಷದ ಹೊನಲು-ಬೆಳಕಿನ ಗ್ರಾಮಾಂತರ ಮಟ್ಟದ ವಾಲಿಬಾಲ್ ಪಂದ್ಯಾವಳಿ ಇಂದು ಸಂಜೆ ಚೋಕಂಡಳ್ಳಿಯಲ್ಲಿ ನಡೆಯಲಿದೆ.

ಸಂಜೆ 7 ಗಂಟೆಗೆ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎಎಸ್ ಪೊನ್ನಣ್ಣ, ಕೊಡವ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷ ದುದ್ಡಿಯಂಡ ಸೂಫಿ ಹಾಜಿ,ಜಿಲ್ಲಾ‌ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಪಿ.ಎ ಹನೀಫ್,ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಫೀಕ್ ಕೋಳುಮಂಡ,ಬಿಳುಗುಂದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸಿಪಿ ಕಾವೇರಪ್ಪ,ಜಿಲ್ಲಾ ಕಾಂಗ್ರೆಸ್ ಮಾಜಿ ಕಾರ್ಯದರ್ಶಿ ಅಬ್ದುಲ್ ರೆಹಮಾನ್, ವಿರಾಜಪೇಟೆ ತಾಲ್ಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಜೀದ್ ಚೋಕಂಡಳ್ಳಿ ಸೇರಿದಂತೆ ಹಲವಾರು ಗಣ್ಯವ್ಯಕ್ತಿಗಳು ಭಾಗವಹಿಸಲಿದ್ದಾರೆ.