ಹೊಸಪಟ್ಟಣ ಗ್ರಾಮದಲ್ಲಿ ಗ್ರಾಮದೈವ ಬಸವೇಶ್ವರ ಕನ್ನಂಬಾಡಮ್ಮ ದೇವರ ಪೂಜೋತ್ಸವ

Apr 15, 2026 - 10:21
 0  164
ಹೊಸಪಟ್ಟಣ ಗ್ರಾಮದಲ್ಲಿ ಗ್ರಾಮದೈವ ಬಸವೇಶ್ವರ ಕನ್ನಂಬಾಡಮ್ಮ ದೇವರ ಪೂಜೋತ್ಸವ

ಕುಶಾಲನಗರ : ಕುಶಾಲನಗರ ತಾಲ್ಲೂಕಿನ ಹೊಸಪಟ್ಟಣ ಗ್ರಾಮದ ಶ್ರೀ ಬಸವೇಶ್ವರ ಹಾಗೂ ಕನ್ನಂಬಾಡಮ್ಮ ದೇವರ ವಾರ್ಷಿಕ ಪೂಜೋತ್ಸವ ಮಂಗಳವಾರ ಶ್ರದ್ದಾಭಕ್ತಿಯಿಂದ ನೆರವೇರಿತು.

 ಪೂಜೋತ್ಸವ ದಲ್ಲಿ ವಿರಾಜಪೇಟೆ ತಾಲ್ಲೂಕು ಅರಮೇರಿ ಮಠದ ಶ್ರೀ ಶಾಂತಮಲ್ಲಿ ಕಾರ್ಜುನ ಸ್ವಾಮೀಜಿ ಭಕ್ತರನ್ನು ಉದ್ದೇಶಿಸಿ ಮಾತನಾಡಿ ಮನುಷ್ಯ ಏನೆಲ್ಲಾ ಗಳಿಸಿದರೂ ಕೂಡ ಮಾನಸಿಕ ಶಾಂತಿ ನೆಮ್ಮದಿ ಪಡೆಯಲು ದೇವಾಲಯಗಳಿಗೆ ಬರಬೇಕಿದೆ.

ಪೂರ್ವಜರು ಆಚರಿಸಿಕೊಂಡು ಬಂದ ಗ್ರಾಮೀಣ ಹಬ್ಬಗಳು, ದೇವರ ಪೂಜೋತ್ಸವಗಳನ್ನು ಮುಂದಿನ ಪೀಳಿಗೆಗೂ ಜತನದಿಂದ ಒಯ್ಯುವುದೇ ಭಾರತೀಯ ಸಂಸ್ಕೃತಿಯ ಸೌಂದರ್ಯ ಎಂದು ಶ್ರೀಗಳು ಹೇಳಿದರು.ಸೋಮವಾರ ಸಂಜೆಯಿಂದ ಆರಂಭವಾದ ದೇವತಾ ಪೂಜೋತ್ಸವ ಮಂಗಳವಾರ ಮಧ್ಯಾಹ್ನ ಸಮಾಪ್ತಿಗೊಂಡಿತು.

ಮಂಗಳವಾರ ಬೆಳಗ್ಗೆ ವಾದ್ಯಮೇಳ, ಅಲಂಕೃತ ದೇವರುಗಳ ಪಲ್ಲಕ್ಕಿಯೊಂದಿಗೆ ಗ್ರಾಮದ ಕಾವೇರಿ ನದಿಗೆ ತೆರಳಿ ಗಂಗಾ ಸ್ನಾನ ನೆರವೇರಿಸಲಾಯಿತು.ಇದೇ ಸಂದರ್ಭ ಹೊಳೆನರಸೀಪುರ ತಾಲ್ಲೂಕಿನ ಉದ್ದೂರು ಗ್ರಾಮದ ವೀರಗಾಸೆ ಕಲಾವಿದ ರಾದ ರವಿಕುಮಾರ ತಂಡದಿಂದ ಆಕರ್ಷಕವಾದ ವೀರಭದ್ರ ನೃತ್ಯ ಭಕ್ತರನ್ನು ಆಕರ್ಷಿಸಿತು.

ಬಳಿಕ ಮಧ್ಯಾಹ್ನ 12 ಗಂಟೆಗೆ ದೇವಾಲಯದ ಮುಂಬದಿ ಅಳವಡಿಸಿದ್ದ ಕೊಂಡೋತ್ಸವದ ಪೂಜೆಯ ಬಳಿಕ ದೇವತಾ ಮೂರ್ತಿಗಳ ಉತ್ಸವ ಗಳನ್ನು ಹೊತ್ತ ಭಕ್ತರು ಬರಿಗಾಲಲ್ಲಿ ಕೆಂಡ ತುಳಿದು ಭಕ್ತಿ ಸಮರ್ಪಿಸಿದರು.ನಂತರ ಮಹಾಮಂಗಳಾರತಿ ಯೊಂದಿಗೆ ಪ್ರಸಾದ ಹಾಗೂ ಅನ್ನಸಂತರ್ಪಣೆ ನಡೆಯಿತು.ಮೈಸೂರಿನ ಕೆ‌.ಎಸ್.ದಿನೇಶ್ ಶಾಸ್ತ್ರಿ ನೇತೃತ್ವದ ತಂಡ ದೇವಾಲಯದ ಧಾರ್ಮಿಕ ವಿಧಿಗಳನ್ನು ನಡೆಸಿತು.

ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷೆ ಪೂರ್ಣಿಮಾ ಶಿವಕುಮಾರ್, ಉಪಾಧ್ಯಕ್ಷ ಅಯ್ಯಂಡ್ರ ಜಯಾನಂದ, ಕಾರ್ಯದರ್ಶಿ ತೇಜಸ್, ಖಜಾಂಚಿ ಸುಖೇಶ್, ಅರ್ಚಕ ಎಸ್.ಎಸ್.ಜಯರಾಜು, ನಿರ್ದೇಶಕರಾದ ತುಂತಜ್ಜಿರ ಡಾಲೇಶ್, ನೇಣಿರ ನವೀನ್ ಕುಮಾರ್, ಎಸ್.ಎಸ್.ಚಂದ್ರಶೇಖರ್, ಹೆಚ್.ಆರ್.ಶಿವಕುಮಾರ್, ಹೆಚ್.ವಿ.ಚಂದ್ರು, ಮಾಡಂಬಿ ಷಣ್ಮುಖ, ಎಂ.ಆರ್.ಮಹೇಶ್, ಶಿವಕುಮಾರ್ ಮೊದಲಾದವರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0