ಕಕ್ಕಬ್ಬೆ ವಿ.ಎಸ್.ಎಸ್.ಎನ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ
ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು:ನಾಪೋಕ್ಲು ಸಮೀಪದ ಕಕ್ಕಬ್ಬೆ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರು ಕಲ್ಯಾಟಂಡ ರಘು ತಮ್ಮಯ್ಯ ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದಸಭಾಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಎಲ್ಲರೂ ದೇಶಾಭೀಮಾನವನ್ನು ಬೆಳೆಸಿಕೊಂಡು ದೇಶದ ಅಭಿವೃದ್ಧಿಗೆ ಶ್ರಮಿಸಿದರೆ ಮಾತ್ರ ದೇಶದ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಬರಲು ಸಾಧ್ಯ ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಬಡಕಡ ಸುರೇಶ್ ಬೆಳ್ಯಪ್ಪ ಸಂಘದ ಎಲ್ಲಾ ನಿರ್ದೇಶಕರು,ಸಿಬಂದಿ ವರ್ಗದವರಿದ್ದರು.