Kodagu

ನಾಡಿನ ಸಂಸ್ಕೃತಿಯನ್ನು ಕಾಪಾಡುವಂತಹ ಬುಡಕಟ್ಟು ಜನಾಂಗದವರ ಏಳಿಗೆಗಾಗಿ ಶ್ರಮಿಸುವುದು ಪ್ರತಿಯೊಬ್ಬರ ಕರ್ತವ್ಯ:ಶಾಸಕ ಎಎಸ್ ಪೊನ್ನಣ್ಣ

admincoorgdaily

ನಾಡಿನ ಸಂಸ್ಕೃತಿಯನ್ನು ಕಾಪಾಡುವಂತಹ ಬುಡಕಟ್ಟು ಜನಾಂಗದವರ ಏಳಿಗೆಗಾಗಿ ಶ್ರಮಿಸುವುದು ಪ್ರತಿಯೊಬ್ಬರ ಕರ್ತವ್ಯ:ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ:ವಿಶ್ವ ಬುಡಕಟ್ಟು ದಿನಾಚರಣೆಯ ಹಾಗೂ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ, ಬಾಳುಗೋಡುವಿನ ಏಕಲವ್ಯ ಮಾದರಿ ವಸತಿ ಶಾಲೆಯ ಸಭಾಂಗಣದಲ್ಲಿ ನಡೆದ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ ಮಡಿಕೇರಿ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಮತ್ತು ಸಂಸ್ಕೃತಿ ಸಿಹಿ ಟ್ರಸ್ಟ್ ಕೊಡಗು, ಇವರ ಜಂಟಿ ಸಹಯೋಗದೊಂದಿಗೆ ಬಾಳುಗೋಡುವಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಶುಭ ಕೋರುತ್ತಾ ಮಾತನಾಡಿದ ಶಾಸಕರು, ವಿಶ್ವ ಬುಡಕಟ್ಟು ದಿನಾಚರಣೆಯ ಅಂಗವಾಗಿ ಈ ಒಂದು ಮಹತ್ವದ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಅತ್ಯಂತ ಸಮಯೋಚಿತವಾಗಿದೆ.

ನಾಡಿನ ಸಂಸ್ಕೃತಿಯನ್ನು ಕಾಪಾಡುವಂತಹ ಬುಡಕಟ್ಟು ಜನಾಂಗದವರ ಏಳಿಗೆಗಾಗಿ ಶ್ರಮಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇಂತಹ ದಿನದಂದು ಬುಡಕಟ್ಟು ಜನರ ಮಧ್ಯೆ ಆರೋಗ್ಯ ತಪಾಸಣೆ ಶಿಬಿರವನ್ನು ಮಾಡುವುದು ಹಾಗೂ ರಕ್ತದಾನದಂತಹ ಉನ್ನತ ಕಾರ್ಯದ ಬಗ್ಗೆ ಮಾಹಿತಿ ಒದಗಿಸಿ ಅವರನ್ನು ಒಳಗೊಡಿಸುವುದು ಪುಣ್ಯಕಾರ್ಯವಾಗಿದೆ ಎಂದು ಬಣ್ಣಿಸಿದರು. ಇದೇ ರೀತಿಯ ಕಾರ್ಯಕ್ರಮಗಳು ಕ್ಷೇತ್ರದ ಇನ್ನಿತರ ಕಡೆಯೂ ಬುಡಕಟ್ಟು ನಿವಾಸಿಗಳು ಇರುವಂತಹ ಜಾಗದಲ್ಲಿ ಮಾಡುವುದು ಉತ್ತಮ ಎಂದು ಸಲಹೆ ನೀಡಿದ ಮಾನ್ಯ ಶಾಸಕರು, ಬುಡಕಟ್ಟು ಜನಾಂಗದವರಲ್ಲಿ ಅನೇಕ ಜನರು ಉನ್ನತ ಶಿಕ್ಷಣ ಮಾಡಿ ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಇಂತಹವರನ್ನು ಮಾದರಿಯಾಗಿ ತಕೊಂಡು ಎಲ್ಲರೂ ಸಮಾಜದಲ್ಲಿ ಮುನ್ನಡೆಗೆ ಬರಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಮಾನ್ಯ ಶಾಸಕರು ಸನ್ಮಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಉಪವಿಭಾಗ ಅಧಿಕಾರಿಗಳು ನಿತಿನ್ ಚಕ್ಕಿ, ಡಾ ಲೋಕೇಶ್, ಡಾ ಮೋಹನ್ ಅಪ್ಪಾಜಿ, ಹರಿಣಿ, ಡಾ ಕರುಂಬಯ್ಯ, ಐಟಿಡಿಪಿ ಅಧಿಕಾರಿಗಳು ಭಾಗಿರಥಿ,ಹಾಗೂ ಪ್ರಮುಖರು ಉಪಸ್ಥಿತರಿದ್ದರು.