ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಉಸ್ತುವಾರಿಯಾಗಿ ಜಾನಿ.ಕೆ.ಪಿ ನೇಮಕ
ಮಂಗಳೂರು:ಮಾಜಿ ಸಚಿವರು, ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯಕುಮಾರ್ ಸೊರಕೆ ಅವರ, ಜಾನಿ ಕೆ.ಪಿ.ಯವರನ್ನು ಕೋಲಾರ ಮತ್ತು ಚಿಕ್ಕಬಳ್ಳಾಪುರದ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.ಈಗಾಗಲೇ ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರಾಗಿ ನೇಮಕ ಗೊಂಡಿರುವ ಕೆ.ಪಿ.ಜಾನಿಯವರು ಸಚಿವರಾದ ಸಂತೋಷ್ ಲಾಡ್ ಅಧ್ಯಕರಾಗಿರುವ ಕರ್ನಾಟಕ ಸರಕಾರದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನಿರ್ದೇಶಕರಾಗಿದ್ದಾರೆ.