ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ, 2026ನೇ ಸಾಲಿನ, ಗೌರವ ಪ್ರಶಸ್ತಿ ಪ್ರದಾನ

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ, 2026ನೇ ಸಾಲಿನ, ಗೌರವ ಪ್ರಶಸ್ತಿ ಪ್ರದಾನ

ಕುಟ್ಟ;ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕೊಡವ ಸಮಾಜ ಕುಟ್ಟ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಿದ, 2026ನೇ ಸಾಲಿನ, ಗೌರವ ಪ್ರಶಸ್ತಿ ಮತ್ತು ಕೊಡವ ಸಾಹಿತ್ಯ-ಸಂಸ್ಕೃತಿರ ಹಬ್ಬದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ಕೊಡವ ಸಮಾಜದ ಸಭಾಭವನದಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನ್ಯ ಶಾಸಕರು, ಅಕಾಡೆಮಿ ವತಿಯಿಂದ ಉತ್ತಮ ಕಾರ್ಯಕ್ರಮಗಳು ನಡೆಯುತ್ತಿದೆ. ಕೊಡವ ಸಂಸ್ಕೃತಿ, ಸಂಪ್ರದಾಯ ಭಾಷೆ ಹಾಗೂ ಸಾಹಿತ್ಯದ ಏಳಿಗೆಗೆ ನಾಡಿನಾದ್ಯಂತ, ವಿವಿಧ ಸ್ಥಳಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಹೆಚ್ಚು ಅನುಕೂಲಕಾರಿ ಎಂದು ಬಣ್ಣಿಸಿದರು.

ಅನಾದಿ ಕಾಲದಿಂದಲೂ ಕುಟ್ಟ ಭಾಗದಲ್ಲಿ ಬಹುತೇಕ ಕೊಡವ ಜನಾಂಗದವರು ವಾಸಿಸುತ್ತಿದ್ದಾರೆ. ಇಂತಹ ಜಾಗದಲ್ಲಿ ಕಾರ್ಯಕ್ರಮ ಮಾಡುವುದರಿಂದ ಎಲ್ಲರ ಸಮ್ಮಿಲನದೊಂದಿಗೆ ನಮ್ಮ ಸಂಸ್ಕೃತಿ ಬೆಳೆಯಲು ತುಂಬಾ ಸಹಕಾರಿಯಾಗಲಿದೆ ಎಂದು ಆಶಿಸಿದರು. ಯುವಜನತೆಗೆ ನಮ್ಮ ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಪಾಲಿಸಲು ಪ್ರೋತ್ಸಾಹ ನೀಡಲು ಇಂತಹ ಕಾರ್ಯಕ್ರಮಗಳು ತುಂಬಾ ಸಹಕಾರಿ.

ಆಧುನಿಕ ಯುಗದೊಂದಿಗೆ ನಾವು ಹೊಂದಿಕೊಂಡರು ಸಹ ನಮ್ಮ ಸಂಸ್ಕೃತಿಯನ್ನು ಕಾಪಾಡಿಕೊಳ್ಳುವುದು ಮುಂದಿನ ಪೀಳಿಗೆಗೆ ಅತಿ ಅವಶ್ಯಕವಾಗಿದೆ. ಕೊಡವ ಸಾಹಿತ್ಯ ಅಕಾಡೆಮಿಯೊಂದಿಗೆ ಈ ಗುರುತರ ಜವಾಬ್ದಾರಿ ನಾಡಿನ ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿಯಾಗಿದೆ ಎಂದು ನೆನಪಿಸಿದರು. ಇದೇ ಸಂದರ್ಭದಲ್ಲಿ ಕೊಡವ ಪತ್ತಾಯ 3ಪುಸ್ತಕ ಉದ್ಘಾಟನೆ ನೆರೆವೇರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರು ಮಂಡೆಪಂಡ ಸುಜಾ ಕುಶಾಲಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಶಾಂತೆಯಂಡ ವೀಣಾ ಅಚ್ಚಯ್ಯ, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಅಜ್ಜಿನಿಕಂಡ ಮಹೇಶ್ ನಾಚಯ್ಯ, ಕುಟ್ಟ ಕೊಡವ ಸಮಾಜದ ಅಧ್ಯಕ್ಷರು ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಕುಟ್ಟ ಕೊಡವ ಸಮಾಜದ ಜಾಗದ ದಾನಿಗಳಾದ ಮುಕ್ಕಾಟೀರ ರಾಜ ಮಂದಣ್ಣ, ಅಖಿಲ ಕೊಡವ ಸಮಾಜದ ಅಧ್ಯಕ್ಷರು ಪರದಂಡ ಸುಬ್ರಮಣಿ, ಅಖಿಲ ಅಮ್ಮ ಕೊಡವ ಸಮಾಜದ ಅಧ್ಯಕ್ಷರು ಬಾನಂಡ ಪ್ರತ್ಯು, ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ಕೊಡವ ಸಾಹಿತ್ಯ ಅಕಾಡೆಮಿಯ ಸರ್ವ ಸದಸ್ಯರು ಪುತ್ತರಿರ ಪಪ್ಪು ತಿಮ್ಮಯ್ಯ, ಕಂಬೆಯಂಡ ಡೀನ ಬೋಜಣ್ಣ,ದಿನು ಬೊಜ್ಜಪ್ಪ, ಕೊಡಿಜಮ್ಮನ ಬಾಲಕೃಷ್ಣ, ಚೊಟ್ಟೆಯಂಡ ಸಂಜು ಕಾವೇರಪ್ಪ, ಗಣೇಶ್, ಕುಟ್ಟಪ್ಪ ,ಗಗನ್, ಕಾವೇರಪ್ಪ, ನಾಯಂದಿರ ಶಿವಾಜಿ, ಉತ್ತಪ್ಪ, 21ಭಾಷಿಕ ಕೊಡವ ಸಮುದಾಯದ ಪ್ರಮುಖರು, ಪ್ರಮುಖರಾದ ಪಾಲ್ವಿನ್ ಪೂಣಚ್ಚ, ತಿತೀರ ಪ್ರಭು, ತಿತ್ತಮಾಡ ಅರ್ಜುನ್ ದೇವಯ್ಯ, ಕ್ಯಾಡಮಾಡ ಕುಸುಮಾ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.