ಕರ್ನಾಟಕ ಭೂ ಕಂದಾಯ ಮಸೂದೆ ಅಂಗೀಕಾರ: ಶಾಸಕ ಎಎಸ್ ಪೊನ್ನಣ್ಣ ಅವರನ್ನು ಸನ್ಮಾನಿಸಿದ ಕೊಡವ ಮುಸ್ಲಿಂ ಅಸೋಸಿಯೇಷನ್

ಕರ್ನಾಟಕ ಭೂ ಕಂದಾಯ ಮಸೂದೆ ಅಂಗೀಕಾರ: ಶಾಸಕ ಎಎಸ್ ಪೊನ್ನಣ್ಣ ಅವರನ್ನು ಸನ್ಮಾನಿಸಿದ ಕೊಡವ ಮುಸ್ಲಿಂ ಅಸೋಸಿಯೇಷನ್

ಮಡಿಕೇರಿ:ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲ ಅಧಿವೇಶನದಲ್ಲಿ ಕೊಡಗು ಜನತೆಯನ್ನು ದಶಕಗಳದಿಂದ ಕಾಡುತ್ತಿದ್ದ ಜಮ್ಮಾ ಹಾಗೂ ಪಟ್ಟೆದಾಸಮಸ್ಯೆ ನಿವಾರಣೆಗೆ ಕಾನೂನು ರೂಪಿಸಲು ಕರ್ನಾಟಕ ಭೂಕಂದಾಯ ಮಸೂದೆಗೆಯನ್ನು ಅಂಗೀಕಾರಗೊಳಿಸಲು ಶ್ರಮಿಸಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರನ್ನು ಇಂದು ಕೊಡಗು ಮುಸ್ಲಿಂ ಎಸೋಸಿಯೇಷನ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

    ಈ ಸಂದರ್ಭದಲ್ಲಿ ಕೊಡವ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷರು ದುಡಿಯಂಡ ಸೂಫಿ ಹಾಜಿ, ಉಪಾಧ್ಯಕ್ಷರು ಚಿಮ್ಮಿಚೀರ ಇಬ್ರಾಹಿಂ, ಕೋಶಾಧಿಕಾರಿ ಹಂಸ ಕೊಟ್ಟಮುಡಿ, ಸಂಘಟನಾ ಕಾರ್ಯದರ್ಶಿ ಇಸ್ಮಾಯಿಲ್, ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಹನೀಫ್ ,ವಿರಾಜಪೇಟೆ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಕೋಳುಮಂಡ ರಫೀಕ್, ರಜಕ್, ಮೈದು, ಪರವಂಡ ಸಿರಾಜ್, ಅಂದಾಯಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.