ಗಯಾನ ದೇಶದಲ್ಲಿ ಮೃತಪಟ್ಟ ಕೊಡಗು ಜಿಲ್ಲೆಯ ಗಿರೀಶ್ ಮೃತ ದೇಹ ಭಾರತಕ್ಕೆ ಕರೆತರಲು ಕರ್ನಾಟಕ ಸರ್ಕಾರದ ವತಿಯಿಂದ ಆರ್ಥಿಕ ಸಹಾಯ

ಮಡಿಕೇರಿ-ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮದ ನಿವಾಸಿಯಾದ ಪಿ.ಬಿ.ಗಿರೀಶಬಾಬು ಪಾಲೆ ಅವರು ದಕ್ಷಿಣ ಅಮೆರಿಕಾದ ಗಯಾನಾ ದೇಶದ ಶೆರಿಫ್ ಜನರಲ್ ಆಸ್ಪತ್ರೆಯಲ್ಲಿ ಸ್ಟಾಪ್ನರ್ಸ್ ಆಗಿ ಸುಮಾರು ಎರಡು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು. 2025 ರ ಜುಲೈ, 03 ರಂದು ಅನಾರೋಗ್ಯ ಕಾರಣದಿಂದ ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಪಿ.ಬಿ.ಗಿರೀಶ ಬಾಬು ಪಾಲೆ ಅವರು ಬಹು ಅನಿಯಮಿತ ರಕ್ತಸ್ರಾವದ ಹೃದಯಘಾತದಿಂದ 2025 ರ ಜುಲೈ, 14 ರಂದು ಸಾವನ್ನಪ್ಪಿದ್ದಾರೆ. ನಂತರ ಅನಿವಾಸಿ ಭಾರತೀಯ ಸಮಿತಿಯು ಆಸ್ಪತ್ರೆ ಹಾಗೂ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪಿ.ಬಿ.ಗಿರೀಶಬಾಬು ಪಾಲೆ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ಕರೆತರುವ ಕಾರ್ಯವನ್ನು ಪ್ರಾರಂಭಿಸಲಾಯಿತು.
ಮೃತನ ಕುಟುಂಬಸ್ಥರು ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಸುಮಾರು ರೂ. 12 ಲಕ್ಷ ಗಳಾಗಬಹುದೆಂದು ರಾಯಭಾರಿ ಕಚೇರಿ ತಿಳಿಸಿದ್ದು, ಜಾನಕಿ. ಕೆ.ಎನ್, ಡಬ್ಲ್ಯು/ಒ ಪಿ.ಬಿ.ಗಿರೀಶ ಬಾಬು ಪಾಲೆ ಅವರು ತಮಗೆ 2 ವರ್ಷದ ಒಬ್ಬ ಮಗನಿದ್ದು ಹಾಗೂ ಕುಟುಂಬವು ಆರ್ಥಿಕವಾಗಿ ಹಿಂದುಳಿದಿದ್ದು, ಸರ್ಕಾರದ ವತಿಯಿಂದ ಸಹಾಯಕ್ಕಾಗಿ ಈ ಕಚೇರಿಗೆ ಮನವಿ ಸಲ್ಲಿಸಿದ್ದರು. ಅದರಂತೆ, ಅನಿವಾಸಿ ಭಾರತೀಯ ಸಮಿತಿಯಿಂದ ಪಿ.ಬಿ.ಗಿರೀಶ ಬಾಬು ಅವರ ಮೃತ ದೇಹವನ್ನು ಭಾರತಕ್ಕೆ ಕರೆತರಲು ತಗಲುವ ವೆಚ್ಚವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಧನ ಸಹಾಯ ಮಾಡಲು ಮಾನ್ಯ ಮುಖ್ಯಮಂತ್ರಿ ಅವರಿಗೆ ಕೋರಲಾಗಿತ್ತು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಅವರು ಕರ್ನಾಟಕ ಸರ್ಕಾರದ ವತಿಯಿಂದ ರೂ 3,60,000 ಗಳನ್ನು ಮಂಜೂರು ಮಾಡಿರುತ್ತಾರೆ. ಉಳಿಕೆ ಹಣವನ್ನು ಪಿ.ಬಿ.ಗಿರೀಶ ಬಾಬು ಪಾಲೆ ಅವರು ಕೆಲಸ ಮಾಡುತ್ತಿದ್ದ ಶೆರಿಫ್ ಜನರಲ್ ಆಸ್ಪತ್ರೆಯವರು ಭರಿಸುತ್ತಿದ್ದು, ಗಯಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹಾಗೂ ನವ ದೆಹಲಿಯಲ್ಲಿರುವ ನಿವಾಸಿ ಆಯುಕ್ತರು ಮೃತದೇಹವನ್ನು ಭಾರತಕ್ಕೆ ತರಲಾಗುವುದು ಎಂದು ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಎಚ್.ಎಸ್.ಸತೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.