ಕಾಸರಗೋಡು:ತಲಪಾಡಿಯಲ್ಲಿ ನಿಯಂತ್ರಣ ತಪ್ಪಿದ ಬಸ್ಸ್ ! ಭೀಕರ ಅಪಘಾತ

Aug 28, 2025 - 19:58
Aug 28, 2025 - 20:09
 0  805
ಕಾಸರಗೋಡು:ತಲಪಾಡಿಯಲ್ಲಿ  ನಿಯಂತ್ರಣ ತಪ್ಪಿದ ಬಸ್ಸ್ !  ಭೀಕರ ಅಪಘಾತ

ಮಂಗಳೂರು: ಕೆಸಿರೋಡ್ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಗುರುವಾರ ಮಧ್ಯಾಹ್ನ 1.30ರ ಸುಮಾರಿಗೆ ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ ನಿಯಂತ್ರಣ ತಪ್ಪಿದ ಪರಿಣಾಮ ನಿಯಂತ್ರಣ ತಪ್ಪಿ ಬಸ್ ಶೆಲ್ಪರ್‌ಗೆ ಢಿಕ್ಕಿ ಹೊಡೆದಿದೆ.

ಕೆಸಿರೋಡ್‌ ನಿವಾಸಿಗಳಾದ ರಿಕ್ಷಾ ಚಾಲಕ ಹೈದರ್ (47), ಖದೀಜಾ (60), ಹಸ್ನಾ (11), ನಫೀಸಾ (52), ಆಯಿಷಾ ಫಿದಾ (19), ಫರಂಗಿಪೇಟೆ ನಿವಾಸಿ ಅವ್ವಮ್ಮ(72) ಮೃತಪಟ್ಟಿದ್ದು, ಕಾಸರಗೋಡು ನಿವಾಸಿಗಳಾದ ಲಕ್ಷ್ಮಿ(61), ಸುರೇಂದ್ರ (39) ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಶೆಲ್ಪರ್ ಹತ್ತಿರ ನಿಲ್ಲಿಸಿದ್ದ ಆಟೋ ರಿಕ್ಷಾದಲ್ಲಿದ್ದವರೂ ಸಹ ಅಪಘಾತಕ್ಕೆ ಒಳಗಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 3
Wow Wow 0