ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಕಂದಾಯ ಸಚಿವರಿಗೆ ಸನ್ಮಾನ
ಮಡಿಕೇರಿ:ಕೊಡಗು ಜಿಲ್ಲಾ ಪ್ರವಾಸ ಹಮ್ಮಿಕೊಂಡಿರುವ, ಕಂದಾಯ ಸಚಿವರ ಶ್ರೀ ಕೃಷ್ಣ ಬೈರೇಗೌಡರವರನ್ನು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ ಎಸ್ ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕರಾದ ಮಂತರ್ ಗೌರವರ ನೇತೃತ್ವದಲ್ಲಿ ಜಿಲ್ಲಾಡಳಿತದ ಕಚೇರಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಮೈಸಿ ಕತ್ತಣಿರ ಹಾಗೂ ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕವನ್ ಕೊತ್ತೋಳಿ,ಕಾಂಗ್ರೆಸ್ ವಕ್ತಾರರ ತೆನ್ನಿರಾ ಮೈನ ಹಾಗೂ ಜಕ್ಕರಿಯ ಬಶೀರ್ ಶಾಹಿದ್ ರವರ ಸಮ್ಮುಖದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.