ಶಾಸಕ ಎಎಸ್ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ ಕೊಡಗು ಹಿತರಕ್ಷಣಾ ಸಮಿತಿ
ಬೆಂಗಳೂರು:ಕೊಡಗು ಗೌಡ ಹಿತರಕ್ಷಣ ಸಮಿತಿ ಕೊಡಗು ಜಿಲ್ಲೆ, ಪದಾಧಿಕಾರಿಗಳು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ, ಮುಂದಿನ ಸಚಿವ ಸಂಪುಟದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣನವರಿಗೆ ಸಚಿವ ಸ್ಥಾನ ನೀಡಬೇಕಾಗಿ ಮನವಿ ಪತ್ರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಪರ್ಮಲೆ ಗಣೇಶ್, ಪಟ್ಟಡ ದೀಪಕ್ ಸುರೇಶ್ ಪಿಎಲ್, ಪೂಜಾರಿರ ಪ್ರದೀಪ್ ಕುಮಾರ್, ಕಾಲೇರಮ್ಮನ ಕುಮಾರ್, ವಿಜಯ್ ಕುಮಾರ್ ಕನ್ಯಾನ, ರಿತಿನ್ ಡೆಮ್ಮಲೆ ಮೊದಲಾದವರು ಉಪಸ್ಥಿತರಿದ್ದರು.
