ಕುಶಾಲನಗರ; ಬೈಕ್ ಅಪಘಾತ,ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿ ಸಾವು
ಕುಶಾಲನಗರ; ಇಲ್ಲಿನ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯಸಿ. ವಿದ್ಯಾರ್ಥಿ ಸುಮಂತ್ ಇಂದು ಪರೀಕ್ಷೆಗೆ ಹಾಜರಾಗುವ ಸಂದರ್ಭ ನವಿಲೂರು ಬಳಿ ಬೈಕ್ ಗಳ ಮುಖಾಮುಖಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಶಾಲನಗರ ಸಮುದಾಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.